ನವದೆಹಲಿ : ಬಿಜೆಪಿಯವರು ಹಿಂದೂಗಳಲ್ಲ, ಮೋದಿ ಹಿಂದೂ ಅಲ್ಲ. ಬಿಜೆಪಿಗೆ ಹಿಂದೂಗಳು ಅಯೋಧ್ಯೆಯಲ್ಲೇ ಪಾಠ ಕಲಿಸಿದ್ದಾರೆ, ಬಿಜೆಪಿ -ಮೋದಿ ಎಂದರೆ ಹಿಂದೂ ಧರ್ಮವಲ್ಲ ಎಂದು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತದ ಪರಿಕಲ್ಪನೆ, ಸಂವಿಧಾನ, ಸಂವಿಧಾನದ ಮೇಲಿನ ದಾಳಿಯನ್ನು ತಡೆಯಲು ಮುಂದಾದವರ ಮೇಲೆ ವ್ಯವಸ್ಥಿತ ಪೂರ್ಣಪ್ರಮಾಣದ ದಾಳಿಗಳು ನಡೆದಿವೆ ಎಂದು ರಾಹುಲ್ ಗಾಂಧಿ ಸದನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ರಾಹುಲ್ ಟೀಕೆಗೆ ಬಿಜೆಪಿ ನಾಯಕರಿಂದ ಭಾರೀ ಆಕ್ಷೇಪ ವ್ಯಕ್ತವಾಗಿದ್ದು, ರಾಹುಲ್ ಗಾಂಧಿ ಕ್ಷಮೆ ಯಾಚನೆಗೆ ಅಮಿತ್ ಶಾ ಆಗ್ರಹಿಸಿದ್ದಾರೆ. ರಾಜನಾಥ್ ಸಿಂಗ್ ಸೇರಿ ಹಲವು ಸಚಿವರು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಬಾವಿಗೆ ಬಿದ್ದು ಕಾನ್ಸ್ಟೇಬಲ್ ಆತ್ಮಹ*ತ್ಯೆ..!
Post Views: 127