ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ. ಸೋಮಶೇಖರ್ ಅಡ್ಡಮತದಾನ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಶಾಸಕ ಸೋಮಶೇಖರ್ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಎಸ್ಟಿಎಸ್ ಏಕಾಂಗಿಯಾಗಿ ಬಂದು ಮತಹಾಕಿದ್ದು, ಮತಹಾಕುವ ಮುನ್ನ ಡಿಸಿಎಂ ಡಿಕೆಶಿ ಕೊಠಡಿಗೆ ಭೇಟಿ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಅಭಿವೃದ್ಧಿಗೆ ನನ್ನ ಮತ ಎಂದಿದ್ದ ಶಾಸಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ. ಆತ್ಮಸಾಕ್ಷಿಯಾಗಿ ನಾನು ಮತದಾನ ಮಾಡಿದ್ದೇನೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 9 ಗಂಟೆಯಿಂದಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿದ್ದು ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಸೂಚನೆ ನೀಡಿದ್ದರು. ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.
ಇದೀಗ ಎಸ್.ಟಿ ಸೋಮಶೇಖರ್ ಅವರು ಯಶವಂತಪುರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಹೌದು.. ಎಸ್ಟಿಎಸ್ ಅವರು ಕಳೆದ ಮೂರ್ನಾಲ್ಕು ತಿಂಗಳಿನಿಂದಲೇ ಕಾಂಗ್ರೆಸ್ ಜತೆ ನಂಟು ಬೆಳೆಸಿದ್ದು, ಡಿಸಿಎಂ ಡಿಕೆಶಿ, ಸಿಎಂ ಸಿದ್ದು ಜತೆ ಗುರುತಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಬೆಂಬಲಿಸುವ ಮೂಲಕ ಸೋಮಶೇಖರ್ ಕಾಂಗ್ರೆಸ್ನತ್ತ ಮುಖಮಾಡಿದ್ದಾರೆ.
ಇದನ್ನೂ ಓದಿ : ರಾಜ್ಯಸಭೆ ಚುನಾವಣೆ : ವಿಧಾನಸಭೆಯಲ್ಲಿ ಮತದಾನ ಆರಂಭ..!