Download Our App

Follow us

Home » ಅಪರಾಧ » ಬೆಂಗಳೂರು : ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ ನಡೆಸ್ತಿದ್ದ ದಂಪತಿ ಅರೆಸ್ಟ್..!

ಬೆಂಗಳೂರು : ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ ನಡೆಸ್ತಿದ್ದ ದಂಪತಿ ಅರೆಸ್ಟ್..!

ಬೆಂಗಳೂರು : ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಿನಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರಿನಲ್ಲಿ ಸಿಸಿಬಿ‌ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಕಾಶ್, ಪಾರಿಜಾತ ದಂಪತಿ ಪಟ್ಟೆಗಾರಪಾಳ್ಯ ನಿವಾಸಿಗಳು. ಇವರು ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸ್ತಿದ್ರು. ಸದ್ಯ ಇಬ್ಬರನ್ನೂ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಆರೋಪಿಗಳು, ಉದ್ಯೋಗ ಕೊಡಿಸುವ ನೆಪದಲ್ಲಿ ಬಡ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾ​ಡುತ್ತಿದ್ದರು. ಉತ್ತರ ಕರ್ನಾಟಕ ಭಾಗದ ಬಡ ಹೆಣ್ಣುಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸ್ತಿದ್ರು. ಬಳಿಕ ವೇಶ್ಯಾವಾಟಿಕೆ ಅಡ್ಡೆಗೆ ದೂಡುತ್ತಿದ್ದರು.

ಆರೋಪಿ ಪ್ರಕಾಶ್, ಪಾರಿಜಾತ ದಂಪತಿ ಕರ್ನಾಟಕದ ಹೆಣ್ಣುಮಕ್ಕಳನ್ನು ಕರೆದೊಯ್ದು ತಮಿಳುನಾಡು, ಪಾಂಡಿಚೇರಿ ರೆಸಾರ್ಟ್​ಗಳಲ್ಲಿ ದಂಧೆ ನಡೆಸ್ತಿದ್ದರು. ಮದುವೆ ಈವೆಂಟ್​ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಪ್ರತಿ ವಾರಕ್ಕೊಮ್ಮೆ ಬೆಂಗಳೂರಿನಿಂದ ತಮಿಳುನಾಡಿಗೆ ಕರೆದೊಯ್ದು ದಂಧೆ ನಡೆಸುತ್ತಿದ್ದರು.

ಹೊರ ರಾಜ್ಯದ ಶ್ರೀಮಂತರು, ಉದ್ಯಮಿಗಳು, ರೆಸಾರ್ಟ್​ಗಳಿಗೆ ಭೇಟಿ ನೀಡ್ತಿದ್ದವರ ಬಳಿ ಈ ಅಮಾಯಕ ಹೆಣ್ಣುಮಕ್ಕಳನ್ನು ದೂಡುತ್ತಿದ್ದರು. ಅಷ್ಟೇ ಅಲ್ಲದೆ ಐಷಾರಾಮಿ ವೇಶ್ಯಾವಾಟಿಕೆ ಪಾರ್ಟಿಯಲ್ಲಿ ಈ ದಂಪತಿ ಮದ್ಯ ಒದಗಿಸುತ್ತಿದ್ದರು. ಪಾರ್ಟಿಗೆ ಬರುವ ಒಬ್ಬರಿಗೆ ತಲಾ 25,000 ದಿಂದ 50 ಸಾವಿರದವರೆಗೂ ನಿಗದಿ ಮಾಡಲಾಗುತ್ತಿತ್ತು. ಬೆಂಗಳೂರಿನಿಂದ ಯುವತಿಯರನ್ನು ಕರೆದೊಯ್ಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ದಾಳಿ ನಡೆಸಿದ್ದು, ಸದ್ಯ ನಾಲ್ವರು ಯುವತಿಯರ ರಕ್ಷಣೆ ಮಾಡಲಾಗಿದೆ. ಹಾಗೂ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ. ಗೋವಿಂದರಾಜ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ದೊಡ್ಮನೆಯಲ್ಲಿ ರೂಲ್ಸ್​ ಬ್ರೇಕ್, ತಪ್ಪಿನ ಲೆಕ್ಕಾಚಾರ – ಕಿಚ್ಚನ ಪಂಚಾಯ್ತಿಯಲ್ಲಿ ಯಾರಿಗೆ ಕ್ಲಾಸ್​? ಯಾರಿಗೆ ಶಿಕ್ಷೆ?

 

 

Leave a Comment

DG Ad

RELATED LATEST NEWS

Top Headlines

ಕರ್ನಾಟಕ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟಿಸಿದ ರಾಗಿಣಿ ದ್ವಿವೇದಿ..!

ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ ಅವರು ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಜ್, ಗೌರವಾಧ್ಯಕ್ಷರಾದ ರವಿಶಂಕರ್,

Live Cricket

Add Your Heading Text Here