Download Our App

Follow us

Home » ಅಪರಾಧ » ಬಸ್​ ಟಿಕೆಟ್ ವಿಚಾರಕ್ಕೆ ಗಲಾಟೆ – ಕಂಡಕ್ಟರ್ ಮೇಲೆ ಹೋಂಗಾರ್ಡ್​ನಿಂದ ​ಹಲ್ಲೆ, ಇಬ್ಬರು ಅರೆಸ್ಟ್​..!

ಬಸ್​ ಟಿಕೆಟ್ ವಿಚಾರಕ್ಕೆ ಗಲಾಟೆ – ಕಂಡಕ್ಟರ್ ಮೇಲೆ ಹೋಂಗಾರ್ಡ್​ನಿಂದ ​ಹಲ್ಲೆ, ಇಬ್ಬರು ಅರೆಸ್ಟ್​..!

ಕೋಲಾರ : ಬಸ್​ ಟಿಕೆಟ್​ ಕೊಡುವ ವಿಚಾರದಲ್ಲಿ ಕಂಡಕ್ಟರ್ ಮತ್ತು ಹೋಂಗಾರ್ಡ್ ನಡುವೆ ಗಲಾಟೆ​ ಆಗಿದ್ದು, ರಸ್ತೆ ನಡುವೆಯೇ ಹೋಂಗಾರ್ಡ್ ಅನುದೀಪ್ ಮತ್ತು ಆತನ ಸಹೋದರ ಪ್ರದೀಪ್ ಸೇರಿ ಕಂಡಕ್ಟರ್​​ನನ್ನು ಕೆಳಗೆ ಬೀಳಿಸಿ ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಗರ ಗ್ರಾಮದಲ್ಲಿ ನಡೆದಿದೆ.

ಟಿಕೆಟ್​ ತೆಗೆದುಕೊಳ್ಳುವಂತೆ ಹೇಳಿದ್ದಕ್ಕೆ ಕಂಡಕ್ಟರ್​ ನಾಗರಾಜಪ್ಪನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಹೋಂಗಾರ್ಡ್​ ಅನುದೀಪ್​ ಹಾಗೂ ಆತನ ಸೋದರ ಪ್ರದೀಪ್ ಅವರನ್ನು​ ಬಂಧಿಸಿ, ಮುಳಬಾಗಿಲು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಈ ಹಲ್ಲೆಯ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

 

 

ಇದನ್ನೂ ಓದಿ : ಅಕ್ರಮವಾಗಿ ಅಕ್ಕಿ ಸಂಗ್ರಹಿಸಿದ ಅಡ್ಡೆಯ ಮೇಲೆ ಪೊಲೀಸರಿಂದ ದಾಳಿ – ಲಕ್ಷಾಂತರ ಮೌಲ್ಯದ ಅನ್ನಭಾಗ್ಯ ಅಕ್ಕಿ ಜಪ್ತಿ..!

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here