Download Our App

Follow us

Home » ರಾಜಕೀಯ » ಸಿಎಂ ಸಿದ್ದರಾಮಯ್ಯಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ – ಬಿ.ವೈ ವಿಜಯೇಂದ್ರ ವಾಗ್ದಾಳಿ..!

ಸಿಎಂ ಸಿದ್ದರಾಮಯ್ಯಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ – ಬಿ.ವೈ ವಿಜಯೇಂದ್ರ ವಾಗ್ದಾಳಿ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ, ಅಧಿಕಾರ ಶಾಶ್ವತ ಎನ್ನುವ ಭ್ರಮೆಯಲ್ಲಿ ಸರ್ಕಾರ ಇದೆ. ರಾಜಕೀಯ ಪ್ರೇರಿತವಾದ ತನಿಖೆಗಳಿಗೆ ಹೆದರಲ್ಲ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕಿಡಿ ಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ವಿಜಯೇಂದ್ರ ಮಾತನಾಡಿ, ಆನೆ ನಡೆದಿದ್ದೇ ದಾರಿ ಎನ್ನುವಂತೆ ಮಾಡುತ್ತಿದ್ದಾರೆ. ಇಂಥಾ ದರ್ಪದ ತೀರ್ಮಾನಗಳನ್ನು ಸಹಿಸಲ್ಲ, ತನಿಖೆಗೆ ನಾವು ಹೆದರಿ ಓಡಿಹೋಗಲ್ಲ.
ಏನೇ ಬಂದರೂ ಧೈರ್ಯವಾಗಿ ಎದುರಿಸುತ್ತೇವೆ ಎಂದಿದ್ದಾರೆ.

ಮುಖ್ಯಮಂತ್ರಿಗಳು ಮುಡಾ ತನಿಖೆಯಿಂದ ವಿಚಲಿತರಾಗಿದ್ದಾರೆ, ಹೀಗಾಗಿ ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚೆಗೆ ತಯಾರಿಲ್ಲ. ಮುನಿರತ್ನ ಪ್ರಕರಣ, ಕೊವಿಡ್ ಖರೀದಿ ಪ್ರಕರಣ, ಬಿಎಸ್​ವೈ ಪ್ರಕರಣಗಳನ್ನು ಚರ್ಚೆ ಮಾಡೋ ಕೆಲಸ ಮಾಡ್ತಿದೆ. ನ್ಯಾ.ಡಿ.ಕುನ್ಹಾ ಸಮಿತಿ ಮಧ್ಯಂತರ ವರದಿ ಮೇಲೆ FIR ಹಾಕಿದ್ದಾರೆ. ಎರಡು ವರ್ಷದಿಂದ ಈ ಸರ್ಕಾರ ಏನ್​ ಮಾಡ್ತಾ ಇತ್ತು, ಸದನದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಿಡ್ತಿಲ್ಲ ಎಂದು ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಗ್ರಂಥಾಧಾರಿತ “ನೀಲವಂತಿ” ಚಿತ್ರದ ಟೈಟಲ್ ರಿಲೀಸ್ ಮಾಡಿದ ಡಾರ್ಲಿಂಗ್ ಕೃಷ್ಣ..!

Leave a Comment

DG Ad

RELATED LATEST NEWS

Top Headlines

ಹಸು ಕೆಚ್ಚಲು ಕೊಯ್ದ ಪ್ರಕರಣ – ಮಾಲೀಕರಿಗೆ 3 ಲಕ್ಷ ರೂ. ಮೌಲ್ಯದ 3 ಹಸು ನೀಡಿದ ಸಚಿವ ಜಮೀರ್ ಅಹ್ಮದ್..!

ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾನುವಾರುಗಳ ಮಾಲೀಕರಿಗೆ ಇಂದು ಮೂರು ಹಸುಗಳನ್ನು ನೀಡಿದ್ದಾರೆ. ಗಾಯಗೊಂಡಿದ್ದ

Live Cricket

Add Your Heading Text Here