Download Our App

Follow us

Home » ಅಪರಾಧ » ಬೆಂಗಳೂರಿನಲ್ಲಿ ತಾಯಿಯೇ ಮಕ್ಕಳನ್ನು ಕೊಂ*ದ ಪ್ರಕರಣ : ಜೈಲಿನಲ್ಲಿ ಆರೋಪಿ ಗಂಗಾದೇವಿ ಆ*ತ್ಮಹತ್ಯೆ..!

ಬೆಂಗಳೂರಿನಲ್ಲಿ ತಾಯಿಯೇ ಮಕ್ಕಳನ್ನು ಕೊಂ*ದ ಪ್ರಕರಣ : ಜೈಲಿನಲ್ಲಿ ಆರೋಪಿ ಗಂಗಾದೇವಿ ಆ*ತ್ಮಹತ್ಯೆ..!

ಬೆಂಗಳೂರು : ತಾಯಿಯೇ ಮಕ್ಕಳನ್ನು ಸಾಯಿಸಿದ್ದ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗಂಗಾದೇವಿ ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತಾಯಿ ಗಂಗಾದೇವಿ ಮಂಗಳವಾರ ರಾತ್ರಿ ಇಬ್ಬರು ಮಕ್ಕಳನ್ನ ಸಾಯಿಸಿದ್ದರು. ಬುಧವಾರ ಬೆಳಿಗ್ಗೆ 112ಗೆ ಕರೆ ಮಾಡಿದ್ದರು. ತಾನು ಆತ್ಮಹತ್ಯೆ ‌ಮಾಡಿಕೊಳ್ಳೊದಾಗಿ ಹೇಳಿದ್ದಳು. ತಕ್ಷಣ ಸ್ಥಳಕ್ಕೆ ಹೋಗಿ ಗಂಗಾದೇವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಪೊಲೀಸರು ಸ್ಥಳಕ್ಕೆ ಭೇಟಿ ಮಾಡಿದಾಗ ಜಾಲಹಳ್ಳಿ ವಿಲೇಜ್ ನಲ್ಲಿ ಗಂಗಾದೇವಿ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಳು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಗಂಗಾದೇವಿಯನ್ನ ಗುರುವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿತ್ತು. ನಂತರ ಗುರುವಾರ ರಾತ್ರಿ ಗಂಗಾದೇವಿ ಜೈಲಿನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ ಮರಣೋತ್ತರ ಪರೀಕ್ಷೆ ಮಾಡಿ ಸಂಬಂಧಿಕರಿಗೆ ಮೃತದೇಹವನ್ನ ಹಸ್ತಾಂತರಿಸಿದ್ದಾರೆ. ಈ ಪ್ರಕರಣ ಪರಪ್ಪನ ಅಗ್ರಹಾರ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ :  ಗ್ಯಾರಂಟಿ ಯೋಜನೆಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ : ಎಚ್​​.ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ..!

Leave a Comment

DG Ad

RELATED LATEST NEWS

Top Headlines

ಕರ್ನಾಟಕ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟಿಸಿದ ರಾಗಿಣಿ ದ್ವಿವೇದಿ..!

ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ ಅವರು ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಜ್, ಗೌರವಾಧ್ಯಕ್ಷರಾದ ರವಿಶಂಕರ್,

Live Cricket

Add Your Heading Text Here