ಬಾಗಲಕೋಟೆ : ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ ಪ್ರಕರಣದಲ್ಲಿ ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ FIR ದಾಖಲಾಗಿದೆ. ಈ ಸಂಬಂಧ ಶ್ರೀಗಳ ಭಕ್ತರೊಬ್ಬರು ಕಲಾದಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ 59 ಮಂದಿ ವಿರುದ್ಧ FIR ದಾಖಲಾಗಿದೆ.
ಕಲಾದಗಿ ಗ್ರಾಮದ ಗುರುಲಿಂಗೇಶ್ವರ ಮಠಕ್ಕೆ SP ಅಮರನಾಥರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾರೇ ಕಾನೂನು ಕೈಗೆ ತೆಗೆದುಕೊಂಡ್ರು ಸೂಕ್ತ ಕ್ರಮ ಜರುಗಿಸೋದಾಗಿ ಹೇಳಿದ್ದಾರೆ.
ವಿವಾದ ಕೋರ್ಟ್ನಲ್ಲಿರುವಾಗ ಕಾನೂನು ಸುವ್ಯವಸ್ಥೆ ಹಾಳು, ಶಾಂತಿ ಕದಡುವ ಉದ್ದೇಶದ ಗಲಾಟೆ ಮತ್ತು ಶ್ರೀಗಳಿಗಾದ ಅವಮಾನ ಎಲ್ಲವನ್ನೂ ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
ರಂಭಾಪುರಿಶ್ರೀ ಕಲಾದಗಿ ಮಠದ ಉತ್ತರಾಧಿಕಾರಿಯಾಗಿ ಕೆ.ಎಂ.ಗಂಗಾಧರ ಸ್ವಾಮೀಜಿಯನ್ನು ಆಯ್ಕೆ ಮಾಡಿದ್ದರು. ಇದನ್ನು ಕಳೆದ ಕೆಲವು ವರ್ಷಗಳ ಹಿಂದೆಯೇ ಗ್ರಾಮದ ಕೆಲವರು ವಿರೋಧಿಸಿದ್ದರು. ಶ್ರೀಗಳು ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೇಳೆ ಭಕ್ತರು ಶ್ರೀಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ : ಸುಪ್ರೀಂ ಕೋರ್ಟ್ ಹೇಳಿರೋ ಜಾಗದಲ್ಲಿ ರಾಮ ಮಂದಿರ ಕಟ್ಟಿಲ್ಲ : ಸಚಿವ ಸಂತೋಷ್ ಲಾಡ್..!