Download Our App

Follow us

Home » ಅಪರಾಧ » ಬೆಂಕಿ ಅವಘಡದಲ್ಲಿ ಮೂವರು ಸಜೀವ ದಹನ ಪ್ರಕರಣ : ಪರ್ಫ್ಯೂಮ್​​ ಗೋಡೌನ್​​ ಮಾಲೀಕರ ಮೇಲೆ ಕೇಸ್​ ದಾಖಲು..!

ಬೆಂಕಿ ಅವಘಡದಲ್ಲಿ ಮೂವರು ಸಜೀವ ದಹನ ಪ್ರಕರಣ : ಪರ್ಫ್ಯೂಮ್​​ ಗೋಡೌನ್​​ ಮಾಲೀಕರ ಮೇಲೆ ಕೇಸ್​ ದಾಖಲು..!

ಬೆಂಗಳೂರು : ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ನಿನ್ನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಸಂಭವಿಸಿತ್ತು. ಈ ಪ್ರಕರಣ ಸಂಬಂಧ ಪರ್ಫ್ಯೂಮ್​​ ಗೋಡೌನ್​​ ಮಾಲೀಕರ ಮೇಲೆ ಕೇಸ್​ ದಾಖಲಾಗಿದೆ.

ಪರ್ಫ್ಯೂಮ್ ಫಿಲ್ಲಿಂಗ್ ವೇಳೆ ಬ್ಲಾಸ್ಟ್‌ಗೊಂಡು ಪರ್ಫ್ಯೂಮ್ ಗೋಡೌನ್‌ಗೆ ಬೆಂಕಿ ತಗುಲಿದ ಪರಿಣಾಮ ಮೂವರು ಸಜೀವ ದಹನವಾಗಿದ್ದು, 5 ಮಂದಿಗೆ ಗಾಯಗಳಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐವರು ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ DIG ರವಿ ಡಿ.ಚನ್ನಣ್ಣನವರ್, ಮಾಗಡಿ DySP, ಪ್ರವೀಣ್, ಇನ್ಸ್​​ಪೆಕ್ಟರ್​ ಮಂಜುನಾಥ್ ಉಗಾರ್ ಭೇಟಿ ನೀಡಿದ್ದಾರೆ. ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆಯುತ್ತಿದ್ದು, ಜೀವಹಾನಿ 304, ಕಾಪಿ ರೈಟ್ ಆ್ಯಕ್ಟ್ 63,63 , ಐಪಿಸಿ ಸೆಕ್ಷನ್ 427 ಅಡಿ ಕೇಸ್​ ದಾಖಲಾಗಿದೆ. ಚಿಕ್ಕಬಸ್ತಿ ಮೂಲದ ವಿಠ್ಠಲ್ ಪರ್ಫ್ಯೂಮ್ ಕಾರ್ಖಾನೆ ಮಾಲೀಕನ ಮೇಲೆ ಕೇಸ್​ ದಾಖಲಾಗಿದೆ.

ಮನೆಯೊಂದರಲ್ಲಿ ಫರ್ಪೂಮ್ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭ ಸ್ಫೋಟಗೊಂಡು ಅವಘಡ ಸಂಭವಿಸಿತ್ತು. ಘಟನೆ ನಡೆಯುವ ವೇಳೆ ಒಟ್ಟು 8 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಫಿಲ್ಲಿಂಗ್ ವೇಳೆ ಸ್ಫೋಟಗೊಂಡಿದ್ದು, ಇಡೀ ಮನೆಯನ್ನು ಆವರಿಸಿದೆ. ಈ ವೇಳೆ ಮೂವರು ಸಜೀವ ದಹನ ಆಗಿದ್ದು, ಉಳಿದ ಐವರು ಗೋಡೌನ್‌ನಿಂದ ಹೊರಗಡೆ ಓಡಿಬಂದಿದ್ದಾರೆ.

ಇದನ್ನೂ ಓದಿ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್‌…!

Leave a Comment

DG Ad

RELATED LATEST NEWS

Top Headlines

ಅಭ್ಯರ್ಥಿ ಡಿಸೈಡ್ ಮಾಡೋದು ಬಿಜೆಪಿ ವರಿಷ್ಠರು ಮತ್ತು ನಾನು – ಯೋಗೇಶ್ವರ್​ಗೆ HDK ಟಾಂಗ್​​​..!

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಚನ್ನಪಟ್ಟಣ

Live Cricket

Add Your Heading Text Here