ಬೆಂಗಳೂರು : ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ನಿನ್ನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಸಂಭವಿಸಿತ್ತು. ಈ ಪ್ರಕರಣ ಸಂಬಂಧ ಪರ್ಫ್ಯೂಮ್ ಗೋಡೌನ್ ಮಾಲೀಕರ ಮೇಲೆ ಕೇಸ್ ದಾಖಲಾಗಿದೆ.
ಪರ್ಫ್ಯೂಮ್ ಫಿಲ್ಲಿಂಗ್ ವೇಳೆ ಬ್ಲಾಸ್ಟ್ಗೊಂಡು ಪರ್ಫ್ಯೂಮ್ ಗೋಡೌನ್ಗೆ ಬೆಂಕಿ ತಗುಲಿದ ಪರಿಣಾಮ ಮೂವರು ಸಜೀವ ದಹನವಾಗಿದ್ದು, 5 ಮಂದಿಗೆ ಗಾಯಗಳಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐವರು ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ DIG ರವಿ ಡಿ.ಚನ್ನಣ್ಣನವರ್, ಮಾಗಡಿ DySP, ಪ್ರವೀಣ್, ಇನ್ಸ್ಪೆಕ್ಟರ್ ಮಂಜುನಾಥ್ ಉಗಾರ್ ಭೇಟಿ ನೀಡಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆಯುತ್ತಿದ್ದು, ಜೀವಹಾನಿ 304, ಕಾಪಿ ರೈಟ್ ಆ್ಯಕ್ಟ್ 63,63 , ಐಪಿಸಿ ಸೆಕ್ಷನ್ 427 ಅಡಿ ಕೇಸ್ ದಾಖಲಾಗಿದೆ. ಚಿಕ್ಕಬಸ್ತಿ ಮೂಲದ ವಿಠ್ಠಲ್ ಪರ್ಫ್ಯೂಮ್ ಕಾರ್ಖಾನೆ ಮಾಲೀಕನ ಮೇಲೆ ಕೇಸ್ ದಾಖಲಾಗಿದೆ.
ಮನೆಯೊಂದರಲ್ಲಿ ಫರ್ಪೂಮ್ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭ ಸ್ಫೋಟಗೊಂಡು ಅವಘಡ ಸಂಭವಿಸಿತ್ತು. ಘಟನೆ ನಡೆಯುವ ವೇಳೆ ಒಟ್ಟು 8 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಫಿಲ್ಲಿಂಗ್ ವೇಳೆ ಸ್ಫೋಟಗೊಂಡಿದ್ದು, ಇಡೀ ಮನೆಯನ್ನು ಆವರಿಸಿದೆ. ಈ ವೇಳೆ ಮೂವರು ಸಜೀವ ದಹನ ಆಗಿದ್ದು, ಉಳಿದ ಐವರು ಗೋಡೌನ್ನಿಂದ ಹೊರಗಡೆ ಓಡಿಬಂದಿದ್ದಾರೆ.
ಇದನ್ನೂ ಓದಿ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್…!