ದೇವನಹಳ್ಳಿ : ದೇವನಹಳ್ಳಿ ಪಟ್ಟಣದ ಸಂತೆ ಮೈದಾನ ಬಳಿ ಕ್ಯಾಂಟರ್ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಕೋಟ್ಯಂತರ ಮೌಲ್ಯದ ವಾಣಿಜ್ಯ ವಸ್ತುಗಳು ಭಸ್ಮವಾಗಿವೆ. ಕ್ಯಾಂಟರ್ನಲ್ಲಿ ಯಾರು ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ತಡರಾತ್ರಿ ಬೆಂಗಳೂರಿನಿಂದ ದೇವನಹಳ್ಳಿ ತಲುಪಿದ್ದ ಟ್ಯಾಂಕರ್ ಇಂದು ಬೆಳಗ್ಗೆ ಮಳಿಗೆಗಳಿಗೆ ವಸ್ತುಗಳನ್ನು ವಿತರಣೆ ಮಾಡಬೇಕಿತ್ತು. ಆದರೆ ಮುಂಜಾನೆ ವೇಳೆಗೆ ಟ್ಯಾಂಕರ್ ಬೆಂಕಿಯಲ್ಲಿ ಬೆಂದು ಹೋಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿದ್ದಾರೆ. ದೇವನಹಳ್ಳಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನ..!
Post Views: 173