ಚಾಮರಾಜನಗರ : ಖಾಸಗಿ ಬಸ್ವೊಂದು ರಸ್ತೆ ಬದಿಗೆ ಉರುಳಿ ಬಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಬಿಳಿಗಿರಿರಂಗನಬೆಟ್ಟದ ಗವಿ ಬೋರೆ ಬಳಿ ನಡೆದಿದೆ.
ಹುಲ್ಲಹಳ್ಳಿ ಅಗಿನವಾಳು ಹಾಗೂ ಸುತ್ತಮುತ್ತಲ ಗ್ರಾಮದವರು ರಂಗನಾಥಸ್ವಾಮಿ ದೇವಾಲಯಕ್ಕೆ ಬಂದಿದ್ದರು. ದೇವರ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. 60ಕ್ಕೂ ಹೆಚ್ಚು ಜನರು ಈ ಬಸ್ನಲ್ಲಿದ್ದರು.
ಬಸ್ ಉರುಳಿ ಬಿದ್ದ ಪರಿಣಾಮ ಬಸ್ನಲ್ಲಿದ್ದ 30 ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಕರ್ನಾಟಕದಲ್ಲಿ ಕಾಂಗ್ರೆಸ್ 18-22 ಸ್ಥಾನ ಗೆಲ್ಲುತ್ತೆ – ಡಾ.ಜಿ.ಪರಮೇಶ್ವರ್..!
Post Views: 155