Download Our App

Follow us

Home » ರಾಜಕೀಯ » ನಿಗಮ ಮಂಡಳಿ ಪಟ್ಟಿಯಲ್ಲಿ ಬದಲಾವಣೆ : ಸಿಎಂ, ಡಿಸಿಎಂ ಗರಂ..!

ನಿಗಮ ಮಂಡಳಿ ಪಟ್ಟಿಯಲ್ಲಿ ಬದಲಾವಣೆ : ಸಿಎಂ, ಡಿಸಿಎಂ ಗರಂ..!

ಬೆಂಗಳೂರು : ನಿಗಮ ಮಂಡಳಿ ಪಟ್ಟಿಯಲ್ಲಾದ ಬದಲಾವಣೆಗೆ ಸಿಎಂ, ಡಿಸಿಎಂ ಗರಂ ಆಗಿದ್ದಾರೆ. ಹೈಕಮಾಂಡ್​ಗೆ ಕಳುಹಿಸದ ಹೆಸರುಗಳು ನಿಗಮ ಮಂಡಳಿ ನೇಮಕಾತಿ ಪಟ್ಟಿಯಲ್ಲಿ ಎಂಟ್ರಿಯಾಗಿದ್ದು, ಇದು ಸಿಎಂ, ಡಿಸಿಎಂ ಶಾಕ್ ಕೊಟ್ಟಿದೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ತಾಜ್ ವೆಸ್ಟ್ ಎಂಡ್ ನಲ್ಲಿ ಸೇರಿ ಚರ್ಚಿಸಿದರು. ದೆಹಲಿಯಿಂದ ಬಂದಿರುವ ನಿಗಮ ಮಂಡಳಿ ಪಟ್ಟಿ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಜೊತೆ ಮಾತುಕತೆ ನಡೆಸಿದರು.

ಈ ವೇಳೆ ತಾವು ಕಳುಹಿಸದ ಪಟ್ಟಿಯಲ್ಲಿ ದೆಹಲಿಯಿಂದ ಬಂದಿರುವ ಕೆಲ ಕಾರ್ಯಕರ್ತರ ಹೆಸರು ಪಟ್ಟಿಯಲ್ಲಿರುವುದಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. 37 ಶಾಸಕ, 39 ಕಾರ್ಯಕರ್ತರಿಗೆ ಪಟ್ಟಿ ಸಿದ್ದವಾಗಿತ್ತು. ಪಟ್ಟಿ ಬಿಡುಗಡೆಯಾಗುವಷ್ಟರಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಕಲಬುರಗಿ ಭಾಗದ ಕೆಲ ಕಾರ್ಯಕರ್ತರ ಹೆಸರು ಪಟ್ಟಿಯಲ್ಲಿರುವುದಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಹಿತಿಯೇ ಇಲ್ಲದೇ ಅದು ಹೇಗೆ ಕೆಲ ಕಾರ್ಯಕರ್ತರ ಹೆಸರು ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಭಾಗದವರ ಹೆಸರು ಸೇರ್ಪಡೆ ಹಿಂದೆ ಹಲವು ಪ್ರಶ್ನೆಗಳು ಉದ್ಭವಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ತಮ್ಮ ಜಿಲ್ಲೆಯ ಕಾರ್ಯಕರ್ತರ ಹೆಸರು ಸೇರ್ಪಡೆ ಮಾಡಿಸಿದ್ರಾ? ಅಥವಾ ಪ್ರಿಯಾಂಕ್ ಖರ್ಗೆ ಶಿಫಾರಸ್ಸು ಮಾಡಿದ್ರಾ? ಹೀಗೆ ಹಲವು ಪ್ರಶ್ನೆಗಳು ಹುಟ್ಟಿಕೊಂಡಿದೆ.

ಇದನ್ನೂ ಓದಿ : ಶ್ರೀರಾಮಮಂದಿರ ಕಾರ್ಯಕ್ರಮ ನೇರ ಪ್ರಸಾರ ರದ್ದು ಮಾಡಿದ ತಮಿಳುನಾಡು ಸರ್ಕಾರ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here