Download Our App

Follow us

Home » ರಾಜಕೀಯ » ಕನಕಪುರ ಸಹೋದರನಿಗೆ ಬಿಟ್ಟು ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ತಾರಾ ಡಿಕೆಶಿ?

ಕನಕಪುರ ಸಹೋದರನಿಗೆ ಬಿಟ್ಟು ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ತಾರಾ ಡಿಕೆಶಿ?

ಬೆಂಗಳೂರು :  ಕೇಂದ್ರ ಸಚಿವ ಹೆಚ್‌ಡಿ ಕುಮಾರಾಸ್ವಾಮಿ ತಮ್ಮ ಚನ್ನಪಟ್ಟಣ ವಿಧಾನಸಭೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಉಪಚುನಾವಣೆ ಕಾವು ಜೋರಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಕಡು ವೈರಿಯಾಗಿರುವ ಎಚ್‌.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸೋತಿರುವ ಡಿ.ಕೆ.ಸುರೇಶ್ ಅವರು ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿತ್ತಾರೆ ಅನ್ನೋ ಮಾತು ಕೇಳಿಬರುತ್ತಿತ್ತು.

ಆದರೆ ಇದೀಗ ಗ್ರಾಮಾಂತರ ಸೋಲಿನ ಸೇಡು ತೀರಿಸಿಕೊಳ್ಳಲು ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್​​ ಅವರೇ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ಚನ್ನಪಟ್ಟಣದಲ್ಲಿ ತಾವೇ ರಿಸ್ಕ್ ತೆಗೆದುಕೊಳ್ಳಲು ತಯಾರಿ ನಡೆಸಿರುವ ಡಿಕೆಶಿ ಅವರು, ಚನ್ನಪಟ್ಟಣದಿಂದ ಕಣಕ್ಕಿಳಿದು ಕನಕಪುರ ಡಿ.ಕೆ.ಸುರೇಶ್​ಗೆ ಬಿಡಲು ಚಿಂತನೆ ನಡೆಸಿದ್ದಾರೆ. ಈ ಮೂಲಕ ಚನ್ನಪಟ್ಟಣದಿಂದ ಕಣಕ್ಕಿಳಿಯೋದು ಡಿಕೆ ಸುರೇಶ್​ ಅವ್ರಾ..? ಡಿಕೆಶಿಯವ್ರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಕನಕಪುರ ಉಪ ಚುನಾವಣೆಯಲ್ಲಿ ಡಿಕೆ ಸುರೇಶ್ ಕಣಕ್ಕಿಳಿಸಿ, ಲೋಕಸಭೆ ಎಲೆಕ್ಷನ್​​ನಲ್ಲಿ ಹೆಚ್‌ಡಿಕೆ ಕೈಮೇಲಾಗಿರೋದನ್ನು ಮಂಕಾಗಿಸಲು ಮೆಗಾ ಪ್ಲಾನ್ ಮಾಡಿರುವ ಡಿಕೆಶಿವಕುಮಾರ್​​ ಅವರು ಇಂದು ಚನ್ನಪಟ್ಟಣ ರೌಂಡ್ಸ್ ಮಾಡಲಿದ್ದಾರೆ. ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ 14 ದೇವಸ್ಥಾನಗಳಿಗೆ ಭೇಟಿ ನೀಡಿ, ಟೆಂಪಲ್ ರನ್ ಮೂಲಕ ಗ್ರೌಂಡ್ ರಿಯಾಲಿಟಿ ತಿಳಿಯಲು ತಯಾರಿ ನಡೆಸಿದ್ದಾರೆ.  ಇನ್ನು ಉಪ ಚುನಾವಣೆ ಸ್ಪರ್ಧೆ ಬಗ್ಗೆ ಡಿಕೆಶಿ ಅವರು ಇಂದು ಅಥವಾ ಜೂನ್​​ 21ರಂದು ಘೋಷಣೆ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ : ರೇಣುಕಾಸ್ವಾಮಿ ಮರ್ಡರ್ ಕೇಸ್ : ದರ್ಶನ್​​​​​ ರಾಕ್ಷಸ ಕೃತ್ಯ ಬಯಲು ಮಾಡಿದ ರಿಮ್ಯಾಂಡ್​ ಕಾಪಿ – ಇಂಚಿಂಚೂ ಡೀಟೇಲ್ಸ್​ ಇಲ್ಲಿದೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here