Download Our App

Follow us

Home » ರಾಜಕೀಯ » ಚನ್ನಪಟ್ಟಣ ಗೆಲ್ಲೋಕೆ ಡಿಕೆಶಿ ರಣವ್ಯೂಹ – ಕ್ಷೇತ್ರದ ಸಮಸ್ಯೆಗಳಿಗೆ ಸ್ಥಳದಲ್ಲೇ ಡಿಕೆಶಿ ಮುಕ್ತಿ..!

ಚನ್ನಪಟ್ಟಣ ಗೆಲ್ಲೋಕೆ ಡಿಕೆಶಿ ರಣವ್ಯೂಹ – ಕ್ಷೇತ್ರದ ಸಮಸ್ಯೆಗಳಿಗೆ ಸ್ಥಳದಲ್ಲೇ ಡಿಕೆಶಿ ಮುಕ್ತಿ..!

ಚನ್ನಪಟ್ಟಣ ಬೈ ಎಲೆಕ್ಷನ್​ ಮೇಲೆ ಕಣ್ಣಿಟ್ಟಿರೋ ಡಿಸಿಎಂ ಡಿಕೆ ಶಿವಕುಮಾರ್​​​​​​​​​​ ಕ್ಷೇತ್ರ ಪ್ರವಾಸ ಮಾಡ್ತಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ನಾಲ್ಕೈದು ಬಾರಿ ಚನ್ನಪಟ್ಟಣಕ್ಕೆ ಎಂಟ್ರಿಕೊಟ್ಟಿರೋ ಡಿಸಿಎಂ ಡಿಕೆ ಶಿವಕುಮಾರ್​​​​ ಮತದಾರರ ಮನದಾಳ ಅರಿತುಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ಇದೀಗ ಮತ್ತೊಮ್ಮೆ ಬೊಂಬೆನಾಡು ಚನ್ನಪಟ್ಟಣಕ್ಕೆ ಕಾಲಿಟ್ಟಿರೋ ಡಿಕೆಶಿ ಮತದಾರರ ಮನೆ ಬಾಗಿಲಿಗೇ ಸರ್ಕಾರವನ್ನ ತೆಗೆದುಕೊಂಡು ಹೋಗಿದ್ದಾರೆ. ಚನ್ನಪಟ್ಟಣದ ಜನರ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಜೂನ್ 24 ರಿಂದ ಜುಲೈ 3 ರವರೆಗೆ ತಾಲೂಕಿನ 9 ಸ್ಥಳಗಳಲ್ಲಿ ಕೈಗೊಂಡಿದ್ದ ʼಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರʼ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು 22735 ಅರ್ಜಿಗಳನ್ನು ನೀಡಿದ್ದಾರೆ. ಈ ಪೈಕಿ ಸುಮಾರು 13,000 ಅರ್ಜಿಗಳು ನಿವೇಶನ ಮತ್ತು ಮನೆಗಾಗಿ ಸಲ್ಲಿಕೆಯಾಗಿವೆ.
ಕಾರಣಾಂತರಗಿಳಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿರುವ ಸಾರ್ವಜನಿಕರಿಗಾಗಿ ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗಿದ್ದು, ಈ ಕೌಂಟರ್‌ನಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ಸೌಲಭ್ಯವನ್ನು ಸದುಪಯೊಗಪಡಿಸಿಕೊಳ್ಳಲು ಕೋರುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್​​ ಪೋಸ್ಟ್​​ ಮಾಡುವ ಮೂಲಕ ತಿಳಿಸಿದ್ದಾರೆ.

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here