ಚನ್ನಪಟ್ಟಣ ಬೈ ಎಲೆಕ್ಷನ್ ಮೇಲೆ ಕಣ್ಣಿಟ್ಟಿರೋ ಡಿಸಿಎಂ ಡಿಕೆ ಶಿವಕುಮಾರ್ ಕ್ಷೇತ್ರ ಪ್ರವಾಸ ಮಾಡ್ತಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ನಾಲ್ಕೈದು ಬಾರಿ ಚನ್ನಪಟ್ಟಣಕ್ಕೆ ಎಂಟ್ರಿಕೊಟ್ಟಿರೋ ಡಿಸಿಎಂ ಡಿಕೆ ಶಿವಕುಮಾರ್ ಮತದಾರರ ಮನದಾಳ ಅರಿತುಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ಇದೀಗ ಮತ್ತೊಮ್ಮೆ ಬೊಂಬೆನಾಡು ಚನ್ನಪಟ್ಟಣಕ್ಕೆ ಕಾಲಿಟ್ಟಿರೋ ಡಿಕೆಶಿ ಮತದಾರರ ಮನೆ ಬಾಗಿಲಿಗೇ ಸರ್ಕಾರವನ್ನ ತೆಗೆದುಕೊಂಡು ಹೋಗಿದ್ದಾರೆ. ಚನ್ನಪಟ್ಟಣದ ಜನರ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಜೂನ್ 24 ರಿಂದ ಜುಲೈ 3 ರವರೆಗೆ ತಾಲೂಕಿನ 9 ಸ್ಥಳಗಳಲ್ಲಿ ಕೈಗೊಂಡಿದ್ದ ʼಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರʼ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು 22735 ಅರ್ಜಿಗಳನ್ನು ನೀಡಿದ್ದಾರೆ. ಈ ಪೈಕಿ ಸುಮಾರು 13,000 ಅರ್ಜಿಗಳು ನಿವೇಶನ ಮತ್ತು ಮನೆಗಾಗಿ ಸಲ್ಲಿಕೆಯಾಗಿವೆ.
ಕಾರಣಾಂತರಗಿಳಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿರುವ ಸಾರ್ವಜನಿಕರಿಗಾಗಿ ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗಿದ್ದು, ಈ ಕೌಂಟರ್ನಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ಸೌಲಭ್ಯವನ್ನು ಸದುಪಯೊಗಪಡಿಸಿಕೊಳ್ಳಲು ಕೋರುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹ*ತ್ಯೆ..!
Post Views: 121