Download Our App

Follow us

Home » ಅಪರಾಧ » ಉಮಾಪತಿಗೌಡಗೆ ಬೆದರಿಕೆ ಹಾಕಿದ್ದ ಡೇಂಜರ್​ ಗ್ಯಾಂಗ್​​ನ ಮೆಂಬರ್​​ ಚೇತನ್​​ ಅರೆಸ್ಟ್​​​..!

ಉಮಾಪತಿಗೌಡಗೆ ಬೆದರಿಕೆ ಹಾಕಿದ್ದ ಡೇಂಜರ್​ ಗ್ಯಾಂಗ್​​ನ ಮೆಂಬರ್​​ ಚೇತನ್​​ ಅರೆಸ್ಟ್​​​..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗ್ತಿದ್ದಂತೆ ನಾಲಿಗೆ ಹರಿಬಿಟ್ಟಿದ್ದ ದರ್ಶನ್​ನ ಅಭಿಮಾನಿ ಚೇತನ್ ಇದೀಗ ಅರೆಸ್ಟ್ ಆಗಿದ್ದಾನೆ.

ಆರೋಪಿ ಚೇತನ್​​ನನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ದರ್ಶನ್ ಬಂಧನ ಬೆನ್ನಲ್ಲೇ ನಿರ್ಮಾಪಕ ಉಮಾಪತಿ ಗೌಡರಿಗೆ ಚೇತನ್ ಬೆದರಿಕೆ ಹಾಕಿ ಅವಹೇಳನಕಾರಿಯಾಗಿ ಮಾತನಾಡಿದ್ದ. ಬಂಧಿತ ಆರೋಪಿ ಚೇತನ್ ಇತರೆ ದರ್ಶನ್ ಅಭಿಮಾ‌ನಿಗಳಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದ. ಈ ಕಾರಣಕ್ಕೆ ಉಮಾಪತಿ ಗೌಡ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಐಪಿಸಿ ಸೆಕ್ಷನ್ 504, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ ಚೇತನ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಉಮಾಪತಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ದರ್ಶನ್​ ಅಭಿಮಾನಿ ಚೇತನ್​ಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ. ಲಾಠಿ ರುಚಿ ತೋರಿಸ್ತಿದ್ದಂತೆ ಬಾಲಮುದುರಿದ ಚೇತನ್, ವೀಡಿಯೋ ಮಾಡಿ ಉಮಾಪತಿಗೌಡಗೆ ಕೈ ಮುಗಿದು ಕ್ಷಮೆ ಕೇಳಿದ್ದಾನೆ. ಚೇತನ್ ಅಂದು ಯುಟ್ಯೂಬರ್ ರಜನಿ ಹೇಳಿದ ಮಾತು ಕೇಳಿ ಅನ್ನಪೂರ್ಣ ಪೊಲೀಸ್ ಠಾಣೆ ಹತ್ತಿರ ಬಂದು ಎಲ್ಲರಿಗೂ ಬೆದರಿಕೆ ಹಾಕಿ ಹೋಗಿದ್ದ. ಇಂದು ಪೊಲೀಸರು ಆತನಿಗೆ ಬಿಸಿ ಬಿಸಿ ಕಜ್ಜಾಯ ಕೊಟ್ಟಿದ್ದಾರೆ. ಚಡ್ಡಿಯಲ್ಲೇ ಚೇತನ್ ಪೊಲೀಸ್ ಠಾಣೆಯಲ್ಲಿ ಕ್ಷಮೆ ಕೋರಿದ್ದಾನೆ. ಈ ವೀಡಿಯೋ ಇದೀಗ ಎಲ್ಲೆಡೆ ವೈರಲ್​ ಆಗುತ್ತಿದೆ.

ಇದನ್ನೂ ಓದಿ : ಸಲಿಂಗ ಕಾಮ ಪ್ರಕರಣ : ತಮ್ಮ ಪ್ರಜ್ವಲ್​ ಇದ್ದ ಕೊಠಡಿಯಲ್ಲೇ ಅಣ್ಣ ಸೂರಜ್​​ ರೇವಣ್ಣಗೆ ಸಿಐಡಿ ಡ್ರಿಲ್​​​..!

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here