ರಾಮನಗರ : ಚುಚ್ಚುಮದ್ದು ನೀಡಿದ ಕೆಲವೇ ಗಂಟೆಗಳಲ್ಲಿ ಮಗು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಸ್ಪೂರ್ತಿ ಮತ್ತು ಮೋಹನ್ ದಂಪತಿಯ ಒಂದೂವರೆ ತಿಂಗಳ ಮಗು ಸಾವನ್ನಪ್ಪಿದೆ.
ಇಂದು ಬೆಳಗ್ಗೆ ದೊಡ್ಡಮಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಷಕರು ಮಗುವಿಗೆ ಇಂಜೆಕ್ಷನ್ ಹಾಕಿಸಿದ್ದರು. ವ್ಯಾಕ್ಸಿನ್ ಹಾಕಿದ ಒಂದು ಗಂಟೆ ಬಳಿಕ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಪೋಷಕರು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮಗು ಸಾವನ್ನಪ್ಪಿದೆ. ಇದೀಗ ಸೂಕ್ತ ರೀತಿಯಲ್ಲಿ ಮಗು ತಪಾಸಣೆ ಮಾಡದೇ ವ್ಯಾಕ್ಸಿನ್ ಹಾಕಿರುವ ಆರೋಪ ಕೇಳಿಬಂದಿದೆ.
ಮಗುವಿನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇಂದು ಅದೇ ಗ್ರಾಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ 18 ಮಕ್ಕಳಿಗೆ ಲಸಿಕೆ ನೀಡಿದ್ದು, 18 ಮಕ್ಕಳ ಪೈಕಿ 17 ಮಕ್ಕಳೂ ಆರೋಗ್ಯವಾಗಿದ್ದಾರೆ.
ಇದನ್ನೂ ಓದಿ : ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಚಿತ್ರಕ್ಕೆ ನೂರು ದಿನಗಳ ಚಿತ್ರೀಕರಣ ಪೂರ್ಣ..!
Post Views: 1,070