ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯ ಅಭಿಷೇಕ್ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ ವೈದ್ಯನ ನಡೆಗೆ ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ರನ್ನು ಸೇವೆಯಿಂದ ವಜಾ ಮಾಡಿ ಚಿತ್ರದುರ್ಗದ ಡಿಸಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಏನಿದು ಘಟನೆ : ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯ ಡಾ.ಅಭಿಷೇಕ್ ಎಂಬಾತ ಜಿಲ್ಲಾಸ್ಪತ್ರೆಯೊಳಗೆ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿಸಿಕೊಂಡಿದ್ದ. ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಇಂಥದೊಂದು ಎಡವಟ್ಟು ಮಾಡಿಕೊಂಡಿದ್ದ. ಆಸ್ಪತ್ರೆಯನ್ನೇ ವೆಡ್ಡಿಂಗ್ ಶೂಟ್ ಲೋಕೇಶನ್ ಮಾಡಿಕೊಂಡು ಅಭಿಷೇಕ್, ರೋಗಿಯೊಬ್ಬರನ್ನು ಬೆಡ್ ಮೇಲೆ ಮಲಗಿಸಿ, ಆಪರೇಷನ್ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದರು. ಕೊನೆಗೆ ಆಪರೇಷನ್ ಮುಗಿದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುವ ಹಾಗೆ ಶೂಟ್ ಮಾಡಿದ್ದರು. ಈ ಎಲ್ಲಾ ದೃಶ್ಯಗಳನ್ನು ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ವೈದ್ಯರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಜನರು ಕಿಡಿಕಾರುತ್ತಿದ್ದರು.
ಈ ಹಿನ್ನೆಲೆ ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ವೈದ್ಯ ಅಭಿಷೇಕ್ ರನ್ನು ಸೇವೆಯಿಂದ ವಜಾ ಮಾಡಿ ಚಿತ್ರದುರ್ಗದ ಡಿಸಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಸೇವೆಯಿಂದ ವಜಾ ಮಾಡಿ ಮುದವೆಗೂ ಮುನ್ನವೇ ವೈದ್ಯನಿಗೆ ಡಿಸಿ ಶಾಕ್ ನೀಡಿದ್ದಾರೆ.
ಇದನ್ನೂ ಓದಿ : ಭಾನುವಾರ 2 ಗಂಟೆಗಳ ಕಾಲ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ..!