Download Our App

Follow us

Home » ಮೆಟ್ರೋ » ಜನರ ಆರೋಗ್ಯ ಕಾಪಾಡಬೇಕಿದ್ದ ವೈದ್ಯರಿಗೆ ಕಾಲರಾ ಅಟ್ಯಾಕ್ : 47 ವೈದ್ಯರಲ್ಲಿ ಕಾಣಿಸಿಕೊಂಡ ಕಾಲರಾ..!

ಜನರ ಆರೋಗ್ಯ ಕಾಪಾಡಬೇಕಿದ್ದ ವೈದ್ಯರಿಗೆ ಕಾಲರಾ ಅಟ್ಯಾಕ್ : 47 ವೈದ್ಯರಲ್ಲಿ ಕಾಣಿಸಿಕೊಂಡ ಕಾಲರಾ..!

ಬೆಂಗಳೂರು :  ಬಿಸಿಲಿನ ಬೇಗೆಯ ನಡುವೆ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಕಾಲರಾ ಭೀತಿ ಉಂಟಾಗಿದೆ. ಜನರ ಆರೋಗ್ಯ ಕಾಪಾಡಬೇಕಿದ್ದ ವೈದ್ಯರಿಗೆ ಕಾಲರಾ ರೋಗಾ ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡಿದ 47 ವೈದ್ಯಕೀಯ ವಿದ್ಯಾರ್ಥಿನಿಯರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡಿದ್ದ 20 ಮಂದಿಗೆ ಟ್ರಾಮಾ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, 15 ಮಂದಿ ಹೆಚ್​​ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ಹಾಸ್ಟೆಲ್​​ನಲ್ಲಿ ಗಬ್ಬು ನಾರುತ್ತಿರುವ ಶೌಚಾಲಯ, ಕೊಳಚೆ ನೀರು ನಿಂತಿದ್ದು, ಈ ಅವ್ಯವಸ್ಥೆ ಕುರಿತು ವೈದ್ಯಕೀಯ ವಿದ್ಯಾರ್ಥಿನಿಯರು ಹಲವು ಬಾರಿ ಆಡಳಿತಕ್ಕೆ ಮನವಿ ಮಾಡಿದ್ದರು. ಇದೀಗ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ವೈದ್ಯಕೀಯ ವಿದ್ಯಾರ್ಥಿನಿಯರ ಆರೋಗ್ಯಕ್ಕೆ ಕುತ್ತು ಬಂದಿದೆ.

ಈಗಾಗಲೇ ಅಸ್ವಸ್ಥಗೊಂಡಿರುವ 47 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ವೈದ್ಯಾಧಿಕಾರಿಗಳ ಮಾಹಿತಿ ನೀಡಿದ್ದಾರೆ. ಇನ್ನು ಹಾಸ್ಟೆಲ್​ನಲ್ಲಿರುವ ವೈದ್ಯಕೀಯ ವಿದ್ಯಾರ್ಥಿನಿಯರಿಗೆ ಹಾಸ್ಟೆಲ್​​ ನೀರು ಬಳಸದಂತೆ ಆಡಳಿತ ಮಂಡಳಿ ಸೂಚನೆ ನೀಡಿದೆ.

ಕೆಲವು ದಿನಗಳ ಹಿಂದೆ ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿನ ಯುವತಿಗೆ ಕಾಲರಾ ರೋಗ ಇಲ್ಲಡರುವುದು ಧೃಢಪಟ್ಟ ಬೆನ್ನಲ್ಲೇ ಇಷ್ಟು 47 ಮಂದಿ ವೈದ್ಯಕೀಯ ವಿದ್ಯಾರ್ಥಿನಿಯರಿಗೆ ಅತಿಸಾರ ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿರುವುದು ತೀವ್ರ ಆತಂಕ ಉಂಟು ಮಾಡಿದೆ.

ಇದನ್ನೂ ಓದಿ : ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಸಿ.ಎನ್.ಮಂಜುನಾಥ್​​ಗೆ ಬಿಗ್ ಶಾಕ್ : ಬಿಜೆಪಿ ನಾಯಕರ ನಡುವೆಯೇ ಮುಸುಕಿನ ಗುದ್ದಾಟ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here