ಮಂಡ್ಯ : ಎರಡು ಗುಂಪಿನ ನಡುವೆ ಘರ್ಷಣೆ ನಡೆದಿರುವ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ. ಒಂದು ಗುಂಪಿನ ಯುವಕನ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ವ್ಯವಹಾರಿಕ ವಿಷಯಕ್ಕೆ 29 ವರ್ಷದ ಅಭಿಲಾಶ್ ಮೇಲೆ ಒಂದು ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ.
ಹಲ್ಲೆಗೊಳಗಾದ ಯುವಕ ಬೆಳ್ಳೂರು ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಹಲ್ಲೆ ಪ್ರಕರಣದಿಂದ ಬೆಳ್ಳೂರಿನಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಬೆಳ್ಳೂರು ಪೊಲೀಸ್ ಠಾಣೆ, ಏಮ್ಸ್ ಆಸ್ಪತ್ರೆಗೆ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಮೂವರನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, 20-25 ಬೈಕ್ಗಳಲ್ಲಿ ಪ್ರಮುಖ ಬೀದಿಗಳಲ್ಲಿ ಸಾಗಿ ಘೋಷಣೆ ಕೂಗಿದ ಆರೋಪ ವ್ಯಕ್ತವಾಗಿದೆ. ಆನಂತರ 50-100 ಮಂದಿ ಸೇರಿ ಒಂದು ಗುಂಪಿನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಮಾಜಿ ಶಾಸಕ ಸುರೇಶ್ಗೌಡ ಯುವಕನ ಆರೋಗ್ಯ ವಿಚಾರಿಸಿದ್ದು, ಹಲ್ಲೆ ಖಂಡಿಸಿ ಬೆಳ್ಳೂರಿನಲ್ಲಿ ಬಂದ್ ನಡೆಸಲು ತೀರ್ಮಾನ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. ಬೆಳ್ಳೂರು ಪಟ್ಟಣಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿದ್ದಾರೆ.
ಇದನ್ನೂ ಓದಿ : ಬಾಗಲಕೋಟೆಯಲ್ಲಿ ಭಯಾನಕ ಕೊ*ಲೆ : ಯುವತಿಯ ರುಂಡ-ಮುಂಡ ಬೇರ್ಪಡಿಸಿರುವ ಹಂತಕರು..!