Download Our App

Follow us

Home » ಅಪರಾಧ » ಕ್ರಿಕೆಟ್ ಜಗಳ ವಿಕೋಪಕ್ಕೆ ತಿರುಗಿ ಗುಂಪು ಘರ್ಷಣೆ – ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ…!

ಕ್ರಿಕೆಟ್ ಜಗಳ ವಿಕೋಪಕ್ಕೆ ತಿರುಗಿ ಗುಂಪು ಘರ್ಷಣೆ – ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ…!

ಬೆಳಗಾವಿ : ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ನಡೆದಿದ್ದು, ಅಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆ ಆರಂಭವಾಗಿದೆ. ಬಳಿಕ ಗಲಾಟೆಯಲ್ಲಿ ಮಧ್ಯಪ್ರವೇಶಿಸಿದ 2 ಗುಂಪಿನ ಯುವಕರು, ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಪ್ರದರ್ಶನ ಮಾಡಿದ್ದಾರೆ. ಯುವಕರ ನಡುವಿನ ಗಲಾಟೆಯಲ್ಲಿ 8 ಮಂದಿಗೆ ಗಾಯಗಳಾಗಿವೆ. ಎರಡೂ ಕಡೆಯವರಿಗೆ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಲಾಟೆಯಲ್ಲಿ ಓರ್ವ ಪೊಲೀಸ್ ಪೇದೆ ಅಮರ್‌ಗೂ ಗಾಯವಾಗಿದೆ. ಸದ್ಯ ಸ್ಥಳದಲ್ಲಿ ಕೆಎಸ್‍ರ್‍ಪಿ, ಮೂರು ಜನ ಸಿಪಿಐ ನಿಯೋಜನೆ ಮಾಡಲಾಗಿದೆ. ಇನ್ನು ಘರ್ಷಣೆ ವಿಚಾರದ ಕುರಿತಂತೆ ಶಹಾಪುರ ಪೊಲೀಸ್ ಠಾಣೆಗೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಘಟನೆ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಜೊತೆಗೆ ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಕಮಿಷನರ್ ಸೂಚನೆ ನೀಡಿದರು. 

ನಗರದ ತುಂಬೆಲ್ಲಾ ರೌಂಡ್ಸ್, ಸೂಕ್ಷ್ಮ ಪ್ರದೇಶದಲ್ಲಿ ನಿಗಾ ವಹಿಸುವಂತೆಯೂ ಸೂಚನೆ ಕೊಟ್ಟಿದ್ದಾರೆ. ಬೆಳಗಾವಿ ನಗರ ಸೇರಿದಂತೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಸಿಬ್ಬಂದಿ ಕರೆಯಿಸುತ್ತಿದ್ದೇವೆ. ಗಲಾಟೆಯಲ್ಲಿ ಎಂಟು ಜನರಿಗೆ ಗಾಯವಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆಯಾಗಿದ್ದು ಬಳಿಕ ದೊಡ್ಡದಾಗಿದೆ. ತಲ್ವಾರ್ ಝಳಪಿಸಿದರ ಕುರಿತು ಮಾಹಿತಿ ಇದೆ. ಸ್ಥಳದಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಯಾರು ಸುಳ್ಳು ವದಂತಿ ಹರಡಿಸಬಾರದು, ಅಂತವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸ್ ಆಯುಕ್ತರು ನೀಡಿದ್ದಾರೆ.

ಇದನ್ನೂ ಓದಿ : ಪರಿಷತ್ ಚುನಾವಣೆ : ಬಂಡಾಯವಾಗಿ ಸ್ಪರ್ಧಿಸಿರುವ ಐದು ಅಭ್ಯರ್ಥಿಗಳು ಕಾಂಗ್ರೆಸ್​ನಿಂದ ಉಚ್ಚಾಟನೆ..!

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here