Download Our App

Follow us

Home » ರಾಜಕೀಯ » ಸಿಎಂ ಬದಲಾವಣೆ ಮಾಡೋದಾದ್ರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ : ಶ್ರೀಶೈಲ ಜಗದ್ಗುರು ಆಗ್ರಹ..!

ಸಿಎಂ ಬದಲಾವಣೆ ಮಾಡೋದಾದ್ರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ : ಶ್ರೀಶೈಲ ಜಗದ್ಗುರು ಆಗ್ರಹ..!

ಚಿಕ್ಕೋಡಿ : ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಠಿ ಮಾಡುವ ವಿಚಾರ ರಾಜ್ಯ ಕಾಂಗ್ರೆಸ್​​​ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ನಿನ್ನೆಯಷ್ಟೇ ಡಿ.ಕೆ ಶಿವಕುಮಾರ್​​ಗೆ ಸಿಎಂ ಸ್ಥಾನವನ್ನು ಬಿಟ್ಟು ಕೊಡುವಂತೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಸಿಎಂ ಬದಲಾವಣೆಗೆ ಬಗ್ಗೆ ವೀರಶೈವ-ಲಿಂಗಾಯತ ನಾಯಕರಿಗೆ ಆದ್ಯತೆ ನೀಡುವಂತೆ  ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾದ್ಯ ಆಗ್ರಹಿಸಿದ್ದಾರೆ.

ಸಿಎಂ ಬದಲಾವಣೆಗೆ ಬಗ್ಗೆ ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಮಾತನಾಡಿರುವ ಶ್ರೀಶೈಲ ಜಗದ್ಗುರು ಅವರು, ಸಿಎಂ ಬದಲಿಸಿದ್ರೆ, ಹೆಚ್ಚುವರಿ ಡಿಸಿಎಂ ಸೃಷ್ಟಿ ಮಾಡಿದ್ರೆ ಲಿಂಗಾಯತರಿಗೆ ನೀಡಿ.
ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಕಾಂಗ್ರೆಸ್​ ಬೆಂಬಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ  ಅವರಂತಹ ನಾಯಕರನ್ನು ಪರಿಗಣಿಸಬೇಕು. ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ ಎಂದು ಎಂದಿದ್ದಾರೆ.

ಇದನ್ನೂ ಓದಿ : ಹಾವೇರಿ ಭೀಕರ ರಸ್ತೆ ಅಪಘಾತ ಪ್ರಕರಣ – ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here