Download Our App

Follow us

Home » ರಾಜಕೀಯ » ಇಂದಿನಿಂದ ಎರಡು ದಿನ ಸಿಎಂ ಮೈಸೂರು ಪ್ರವಾಸ – ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ..!

ಇಂದಿನಿಂದ ಎರಡು ದಿನ ಸಿಎಂ ಮೈಸೂರು ಪ್ರವಾಸ – ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ..!

ಮೈಸೂರು : ಮತ್ತೊಂದು ಮುಡಾ ಸಂಕಷ್ಟ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಎರಡು ದಿನ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಎರಡು ದಿನಗಳು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. HALನಿಂದ ಇಮದು ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳುವ ಸಿಎಂ, “ಸುವರ್ಣ ಸಂಭ್ರಮ ಕರ್ನಾಟಕ 50 ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ, ಕರ್ನಾಟಕ ಸಾಂಸ್ಕೃತಿಕ ಮುನ್ನೋಟ ಚಿಂತನಾ ಸಮಾವೇಶ”ದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನ (ರಿ.) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಲಲಿತಕಲಾ, ಶಿಲ್ಪಕಲಾ, ಜಾನಪದ, ಅಕಾಡೆಮಿಗಳು ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ, ಶ್ರೀ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ (ರಿ.) ಕದಂಬ ರಂಗ ವೇದಿಕೆ (ರಿ.), ಚಿತ್ರವನ ರೆಸಾರ್ಟ್, ರಾಮ್ ಸನ್ಸ್ ಕಲಾ ಪ್ರತಿಷ್ಠಾನ (ರಿ.) ಇವರ ಸಂಯುಕ್ತಾಶ್ರಯದಲ್ಲಿ ವಿಜಯನಗರ 2ನೇ  ಆಯೋಜಿಸಲಾಗಿರುವ ಪಿ.ಆರ್. ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವ ಸಮಾರೋಪ ಸಮಾರಂಭ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ನಾಳೆ (ಸೆ.21) ಬೆಳಗ್ಗೆ 10.30 ಗಂಟೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಮಾನಸ ಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಪತ್ರಿಕಾ ದಿನಾಚರಣೆ 2024-ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಇದನ್ನೂ ಓದಿ : ತಿಮ್ಮಪ್ಪನ ಭಕ್ತರಿಗೆ ಶಾಕ್.. ತಿರುಪತಿ ಲಡ್ಡಿನಲ್ಲಿ ದನ, ಹಂದಿ ಕೊಬ್ಬಿನ ಅಂಶ, ಮೀನಿನ ಎಣ್ಣೆ ಬಳಕೆ ದೃಢ..!

Leave a Comment

DG Ad

RELATED LATEST NEWS

Top Headlines

ಮೆಟ್ರೋ ತಡೆಗೋಡೆಗೆ ಗೂಡ್ಸ್ ಲಾರಿ ಡಿಕ್ಕಿ.. ನಾಗವಾರ-ಹೆಬ್ಬಾಳ ಮಾರ್ಗದಲ್ಲಿ 10 ಕಿಲೋಮೀಟರ್​ ಟ್ರಾಫಿಕ್ ಜಾಮ್..!

ಬೆಂಗಳೂರು : ಗೂಡ್ಸ್ ಲಾರಿ ಮೆಟ್ರೋ ಕಾಮಗಾರಿಯ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ನಗರದ ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ನಡೆದಿದೆ. ಇಂದು ಬೆಳಗ್ಗೆ 7ಗಂಟೆ ಸುಮಾರಿಗೆ

Live Cricket

Add Your Heading Text Here