ಯಾದಗಿರಿ : ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಮುಗಿಯುತ್ತಿದ್ದಂತೆಯೇ ಲೋಕಸಭೆ ಚುನಾವಣೆಯ ಕಾವು ಈಗ ರಾಜ್ಯದ ‘ಉತ್ತರ’ ಭಾಗಕ್ಕೆ ಶಿಫ್ಟ್ ಆಗಿದೆ. ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಿಟ್ಟಿನಲ್ಲಿ ಇಂದು ಯಾದಗಿರಿ, ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಸಂಚಾರ ಮಾಡುವ ಮೂಲಕ ಪಕ್ಷದ ಅಭ್ಯರ್ಥಿಗಳ ಪರ ಮತಶಿಕಾರಿ ಮಾಡಲಿದ್ದಾರೆ.
ನಿನ್ನೆ ಸಿಎಂ ಸಿದ್ದರಾಮಯ್ಯ ಬಳ್ಳಾರಿ ಕ್ಷೇತ್ರದ ಹಲವೆಡೆ ಪ್ರಚಾರ ನಡೆಸಿದ್ದಾರೆ. ಬಳ್ಳಾರಿಯಿಂದ ಸುರಪುರಕ್ಕೆ ಬರಲಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡು, ಸುರಪುರದ ದೇವತಕಲ್ನಲ್ಲಿ ಅಸೆಂಬ್ಲಿ ಉಪ ಚುನಾವಣೆ ಅಭ್ಯರ್ಥಿ, ಲೋಕಸಭೆ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.
ತದನಂತರ ಸಿಎಂ ಸಿದ್ದರಾಮಯ್ಯ ಯಾದಗಿರಿಯಲ್ಲಿ ಪ್ರಚಾರ ಸಭೆ ನಡೆಸಲಾಗಿದ್ದಾರೆ. ಸಂಜೆ ಜೇವರ್ಗಿಗೆ ತೆರಳಿ ಕಾಂಗ್ರೆಸ್ ಸಮಾವೇಶದಲ್ಲಿ ಭಾಗಿಯಾಗಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ಇಂದು ರಾತ್ರಿ ಕಲಬುರಗಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಇದನ್ನೂ ಓದಿ : SIT ನೋಟಿಸ್ ಬೆನ್ನಲ್ಲೇ ಪ್ರಜ್ವಲ್ಗೆ ಹೆಚ್ಚಾಯ್ತು ಸಂಕಷ್ಟ- ವಿಚಾರಣೆಗೆ ಹಾಜರಾದ ಕೂಡಲೇ ಅರೆಸ್ಟ್ ಫಿಕ್ಸಾ?