Download Our App

Follow us

Home » ರಾಜಕೀಯ » ಬಿಜೆಪಿಗೆ ಜೈ ಶ್ರೀರಾಮ್ ಎಂದು ಟಾಂಗ್ ನೀಡಿದ್ರಾ ಸಿಎಂ ಸಿದ್ದರಾಮಯ್ಯ..?

ಬಿಜೆಪಿಗೆ ಜೈ ಶ್ರೀರಾಮ್ ಎಂದು ಟಾಂಗ್ ನೀಡಿದ್ರಾ ಸಿಎಂ ಸಿದ್ದರಾಮಯ್ಯ..?

ಬೆಂಗಳೂರು : ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಮಮಂದಿರ ಉದ್ಘಾಟಿಸಿದ್ದಾರೆ. ಈ ಮೂಲಕ ಪದೇ-ಪದೇ ತಮ್ಮನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಅವರು ರಾಮ ವಿರೋಧಿ ಎಂದು ಬಿಜೆಪಿ ನಾಯಕರು ಬಿಂಬಿಸಿದ್ದರು. ಹಾಗಾಗಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿಯಲ್ಲ ಅನ್ನೊ ಸಂದೇಶ ಸಾರಲು ರಾಮಮಂದಿರ ಉದ್ಘಾಟನೆ ಮಾಡಿದ್ದಾರೆ. ರಾಮಮಂದಿರ ಉದ್ಘಾಟಿಸಿ ನಾನು ರಾಮಭಕ್ತ, ಶ್ರೀರಾಮ ಯಾರೊಬ್ಬರ ಸ್ವತ್ತಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಿಂದುಪರ ಸಂಘಟನೆಗಳಿಗೆ ಟಾಂಗ್ ನೀಡಿದ್ದಾರೆ.

ಇದೇ ವೇಳೆ ಜೈ ಶ್ರೀ ರಾಮ್ ಎಂದು ಸಿದ್ದರಾಮಯ್ಯ ಘೋಷಣೆ ಕೂಗಿದ್ದಾರೆ. ಹಾಗಾಗಿ ಬಿಜೆಪಿಗೆ ಜೈ ಶ್ರೀರಾಮ್ ಎಂದು ಟಾಂಗ್ ನೀಡಿದ್ರಾ ಸಿಎಂ ಸಿದ್ದು..? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಮೂಲಕ ಸಿದ್ದರಾಮಯ್ಯ ಹಿಂದು ವಿರೋಧಿ ಎಂದವರಿಗೆ ಸಿಎಂ ತಿರುಗೇಟು ನೀಡಿದ್ದಾರೆ.

ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ.

ಈ ವೇಳೆ ಮಾತನಾಡಿ, ಧರ್ಮದ ಹೆಸರಲ್ಲಿ ನಡೆಯುವ ಅಧರ್ಮಕ್ಕೆ ವಿರೋಧಿ, ಬಿಜೆಪಿ ಕೈಗೆ ಹಿಂದು ವಿರೋಧಿ ಅಸ್ತ್ರ ಸಿಗದಂತೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ಎಲ್ಲಾ ಧರ್ಮ ಗೌರವಿಸುವ ಬಗ್ಗೆ ಸಂದೇಶ ಸಾರಿದ್ದು, ಲೋಕಸಭೆ ಎಲೆಕ್ಷನ್​ನಲ್ಲಿ ಹಿನ್ನಡೆ ಆಗದಂತೆ ಸಿದ್ದು ಬಿಗ್​ ಪ್ಲಾನ್​​​ ಮಾಡಿದ್ದಾರೆ.

ಇದನ್ನೂ ಓದಿ : ಕೋಟೆನಾಡಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವಿಳಂಬ : ಚಿತ್ರದುರ್ಗದಲ್ಲಿಂದು ಸರ್ಕಾರದ ನೀತಿ ಖಂಡಿಸಿ ಬಂದ್..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here