Download Our App

Follow us

Home » ರಾಜಕೀಯ » ED ಚಾರ್ಜ್​ಶೀಟ್​ ಬೆನ್ನಲ್ಲೇ ವಾಲ್ಮೀಕಿ ನಿಗಮದ ಮೆಗಾ ಮೀಟಿಂಗ್ ಕರೆದ ಸಿಎಂ ಸಿದ್ದು..!

ED ಚಾರ್ಜ್​ಶೀಟ್​ ಬೆನ್ನಲ್ಲೇ ವಾಲ್ಮೀಕಿ ನಿಗಮದ ಮೆಗಾ ಮೀಟಿಂಗ್ ಕರೆದ ಸಿಎಂ ಸಿದ್ದು..!

ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಹಲವರ ವಿರುದ್ಧ ಕೋರ್ಟ್​ಗೆ 4970 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ.

ED ಅಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಹಗರಣ ಹೇಗೆ ನಡೆಯಿತೆಂದು ಎಳೆಎಳೆಯಾಗಿ ಬರೆದಿದ್ದು, ಪ್ರಕಣದಲ್ಲಿ ಬಿ.ನಾಗೇಂದ್ರ ಅವರೇ ಮಾಸ್ಟರ್ ಮೈಂಡ್ ಎಂದು ಉಲ್ಲೇಖಿಸಿದೆ. ಇನ್ನು ಬಹುಕೋಟಿ ಹಗರಣ 20.19 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಪ್ರಸ್ತಾಪ ಮಾಡಲಾಗಿದೆ. ನಾಗೇಂದ್ರ ಅವರ ಸೂಚನೆಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ ಎಂದು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇದೀಗ ED ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕ್ಕೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆ ​​​ಕರೆದಿದ್ದಾರೆ. ವಾಲ್ಮೀಕಿ ನಿಗಮದ ಹಗರಣ ಹೊರ ಬಂದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಸಭೆ ಕರೆದಿದ್ದು, ಇಂದು ಬೆಳಗ್ಗೆ 11.30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮೆಗಾ ಮೀಟಿಂಗ್​ ನಡೆಯಲಿದೆ. ವಾಲ್ಮೀಕಿ ನಿಗಮದ ಜೊತೆಗೆ ಸಿಎಂ ಪರಿಶಿಷ್ಟ ಪಂಗಡಗಳ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಇದನ್ನೂ ಓದಿ : ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ನಟನ ಎದೆ ಭಾಗಕ್ಕೆ ಭಾರಿ ಪೆಟ್ಟು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here