Download Our App

Follow us

Home » ರಾಜಕೀಯ » ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ FIR ದಾಖಲು..!

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ FIR ದಾಖಲು..!

ಚಿತ್ರದುರ್ಗ : ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ FIR ದಾಖಲು ಮಾಡಲಾಗಿದೆ. ಬಂಡಾಯದ ಬೆಂಕಿ ಬೆನ್ನಲ್ಲೇ ಇದೀಗ ಗೋವಿಂದ ಕಾರಜೋಳಗೆ FIR ಸಂಕಷ್ಟ ಎದುರಾಗಿದೆ.

ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಮಾರ್ಚ್​ 31ರಂದು ಜಿಲ್ಲೆಯ ನಾಯಕನಹಟ್ಟಿ ದೇವಸ್ಥಾನದಲ್ಲಿ ರಾಜಕೀಯ ಭಾಷಣ ಮಾಡಿದ್ದಾರೆ. ಎಲೆಕ್ಷನ್​ ಇರುವುದರಿಂದ ಧಾರ್ಮಿಕ ಕೇಂದ್ರದಲ್ಲಿ ರಾಜಕೀಯ ಭಾಷಣಕ್ಕೆ ಅವಕಾಶ ಇರುವುದಿಲ್ಲ. ಆದರೂ ಕಾರಜೋಳ ಅವರು ತಮ್ಮ ಭಾಷಣದಲ್ಲಿ ಜನರ ಮಧ್ಯೆ ವಿಷಬೀಜ ಬಿತ್ತುವ ಮಾತುಗಳನ್ನಾಡಿ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿಯನ್ನ ನಡೆಸಿದ್ದಾರೆ.

ಹಾಗೂ ಮೋದಿ ಸರ್ಕಾರದ ಪರ ಭಾವನಾತ್ಮಕ ಭಾಷಣ ಮಾಡಿದ ಆರೋಪ ಕೇಳಿಬಂದಿದೆ. ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿ ಇದ್ದರೂ ರಾಜಕೀಯ ಭಾಷಣ ಮಾಡಿದ್ದಾರೆಂದು ಈ ಕುರಿತು SST ಟೀಮ್ ನ ಗಿರೀಶ್ ಎಂಬುವರು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಇವರ ದೂರಿನ ಆಧಾರದ ಮೇಲೆ ನಾಯಕನಹಟ್ಟಿ ಪೊಲೀಸರು ಇದೀಗ ಕಾರಜೋಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಧಾರ್ಮಿಕ ಕೇಂದ್ರ ದುರ್ಬಳಕೆ, IPC ಕಲಂ171(f) 125RP ಸೆಕ್ಷನ್ ಅಡಿಯಲ್ಲಿ FIR ದಾಖಲಿಸಲಾಗಿದೆ.

 

ಇದನ್ನೂ ಓದಿ : ಬೀದರ್ : ನಕಲಿ ಪೊಲೀಸರ ಸೋಗಿನಲ್ಲಿ ಹಣ ದೋಚಿದ ಚಾಲಾಕಿ ಕಳ್ಳರು – 21ಲಕ್ಷ ರೂ.ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here