ಬಳ್ಳಾರಿ : ಲೋಕಸಭೆ ಎಲೆಕ್ಷನ್ ನೀತಿ ಸಂಹಿತೆ ಎಫೆಕ್ಟ್ ಹಾಗೂ ಎಲ್ಲಾ ಅಧಿಕಾರಿಗಳು ಚುನಾವಣೆ ಕೆಲಸದಲ್ಲಿ ತೊಡಗಿಸಿಕೊಂಡಿರುವ ಹಿನ್ನೆಲೆ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಎಲೆಕ್ಷನ್ ಮುಂದೂಡಿಕೆಯಾಗಿದೆ. ಎಲೆಕ್ಷನ್ ಮುಂದೂಡಿ ಕಲಬುರಗಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಆದರೆ ಮುಂದಿನ ದಿನಾಂಕವನ್ನು ನಿಗದಿ ಮಾಡಿಲ್ಲ.
ಲೋಕಸಭೆ ಚುನಾವಣೆ ಮುಗಿದ ಬಳಿಕ ಮೇಯರ್ ಚುನಾವಣೆ ದಿನಾಂಕ ನಿಗದಿ ಮಾಡೋದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಬಳ್ಳಾರಿ ಪಾಲಿಕೆಯಲ್ಲಿ ಕಾಂಗ್ರೆಸ್ ಬಹುಮತ ಹೊಂದಿದೆ, ಮೇಯರ್ ಶ್ವೇತಾ ಅವಧಿ ಮುಗಿದ ಹಿನ್ನೆಲೆ ಮೇಯರ್ ಚುನಾವಣೆ ನಿಗದಿಯಾಗಿತ್ತು. ಕಳೆದ ಬಾರಿಯೂ ಮೇಯರ್-ಉಪಮೇಯರ್ ಎಲೆಕ್ಷನ್ ಮುಂದೂಡಿಕೆಯಾಗಿತ್ತು.
ಬಳ್ಳಾರಿ ಪಾಲಿಕೆಯಲ್ಲಿ ಇಂದು ನಡೆಯಬೇಕಿದ್ದ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ಜನ ಆಕಾಂಕ್ಷಿಗಳು ಭರ್ಜರಿ ಗಿಫ್ಟ್ ಪಾಲಿಟಿಕ್ಸ್ ಆರಂಭ ಮಾಡಿದ್ದರು. ಪಾಲಿಕೆ ಸದಸ್ಯರಿಗೆ ಸೀರೆ, ಪಂಚೆ, ಬೆಳ್ಳಿ, ಬಂಗಾರದ ಉಡುಗೊರೆ ನೀಡಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಇದನ್ನೂ ಓದಿ : ಬಾಗಲಕೋಟೆ : ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ..!