ಬೆಂಗಳೂರು : ಅಮೆರಿಕದಲ್ಲಿ ಸಂದರ್ಶನದ ವೇಳೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿಖ್ ವಿರೋಧಿ ಹೇಳಿಕೆ ನೀಡಿದ್ದಾರೆಂದು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ಬಿಜೆಪಿ ನಿಯೋಗ ಇಂದು ದೂರು ಸಲ್ಲಿಸಿದೆ.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತಕುಮಾರ್ ಸೇರಿ ಬಿಜೆಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ವೇಳೆ ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿಯಬರು, ರಾಹುಲ್ ಗಾಂಧಿ ವಿರುದ್ಧ ಈಗ ದೂರು ದಾಖಲಿಸಿದ್ದೇವೆ. ತಕ್ಷಣ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲು ಮಾಡಿ ಅವರ ಮೇಲೆ ಕ್ರಮ ಜರುಗಿಸಬೇಕು.
ಇದು ನಾನ್ ಬೇಲಬಲ್ ಪ್ರಕರಣ. ಐಟಿ ಕಾಯ್ದೆಯಲ್ಲೂ ರಾಹುಲ್ ಗಾಂಧಿ ಹೇಳಿಕೆ ಅಪರಾಧ. ಈ ಪ್ರಕರಣದಲ್ಲಿ ಎಫ್ಐಆರ್ ಹಾಕಲೇಕಾಗುತ್ತದೆ. ವಿಜಯಪುರ, ಬೀದರ್ಗಳಲ್ಲೂ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು ಮಾಡಲಾಗ್ತಿದೆ. ಹೊರ ರಾಜ್ಯಗಳಲ್ಲೂ ದೂರು ದಾಖಲಾಗ್ತಿದೆ ಎಂದು ಹೇಳಿದ್ದಾರೆ.
ಅಮೆರಿಕದಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆ ಏನು? ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನೂರಾರು ಭಾರತೀಯ ಅಮೆರಿಕನ್ನರ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತದಲ್ಲಿ ಸಿಖ್ ಸಮುದಾಯದವರಿಗೆ ಪೇಟ ಧರಿಸಲು, ಕಡಗ ಹಾಕಿಕೊಳ್ಳಲು ಅವಕಾಶ ಸಿಗುತ್ತಾ, ಗುರುದ್ವಾರಕ್ಕೆ ಹೋಗಲು ಬಿಡಲಾಗುತ್ತಾ ಎನ್ನುವುದರ ಕುರಿತು ಹೇಳಿಕೆ ನೀಡಿದ್ದರು. ಈ ಸಂಬಂಧ ಬಿಜೆಪಿ ವಲಯದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದರು.
ಇದನ್ನೂ ಓದಿ : ಕಲಬುರಗಿ : ಬೆಂಗಳೂರಿಗೆ ಗನ್ ಸಪ್ಲೈ ಮಾಡುತ್ತಿದ್ದ ಕೊಲೆ ಆರೋಪಿ ಮೇಲೆ ಪೋಲಿಸರ ಫೈರಿಂಗ್..!
ಇದನ್ನೂ ಓದಿ : ‘ಮರ್ಫಿ’ಯಿಂದ ಬಂತು ಡ್ಯಾನ್ಸಿಂಗ್ ನಂಬರ್.. ಅಕ್ಟೋಬರ್ 18ಕ್ಕೆ ಸಿನಿಮಾ ತೆರೆಗೆ..!