ಹಾಸನ : ರಾಜ್ಯದ 28 ಕ್ಷೇತ್ರಗಳಲ್ಲಿ ಹಾಸನವು ಈ ಬಾರಿ ಅತಿ ಹೆಚ್ಚು ಗಮನ ಸೆಳೆದ ಕ್ಷೇತ್ರ. ಅದಕ್ಕೆ ಕಾರಣವೂ ಉಂಟು. ಲೋಕಸಭೆ ಚುನಾವಣೆಯ ನಡುವೆ ಭಾರತ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದ ನಡುವೆಯೇ ಅಲ್ಲಿನ ಫಲಿತಾಂಶ ಏನಾಗಬಹುದು ಎನ್ನುವ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ.
ಹಾಸನ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದು, 25 ವರ್ಷಗಳ ಹಾಸನದಲ್ಲಿ ಜೆಡಿಎಸ್ಗೆ ಸೋಲಾಗಿದೆ. ತಾತನ ಕೋಟೆಯನ್ನು ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ನಿಂದ ಕಳೆದುಕೊಂಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಯ ಹೊರತು ಇದೀಗ ಹೊರಬೀಳುತ್ತಿರುವ ಫಲಿತಾಂಶ ನೋಡಿದ್ರೆ ಮತದಾರರು ಅಚ್ಚರಿ ಮೂಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸೋಲಿನಿಂದ STI ಸೆಲ್ನಲ್ಲಿ ಕುಸಿದು ಕುಳಿತ್ತಿದ್ದು, ಸಿಟ್ಟಿನಿಂದ ಚೇರ್ಗೆ ಜಾಡಿಸಿ ಒದ್ದಿದ್ದಾರೆ.
ಇದನ್ನೂ ಓದಿ : ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಭರ್ಜರಿ ಗೆಲುವು..!