ಬೆಂಗಳೂರು : ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಒಂದೆರಡು ದಿನಗಳು ಬಾಕಿ ಉಳಿದಿದ್ದು, ಇದರ ನಡುವೆ ಕೇಂದ್ರದ ವಿರುದ್ದ ಕಾಂಗ್ರೆಸ್ ಪಕ್ಷದ ನಾಯಕರು ದಿನಕ್ಕೊಂದು ಪ್ರೊಟೆಸ್ಟ್ ಕೈಗೊಳ್ಳುತ್ತಿದ್ದಾರೆ.
ನಿನ್ನೆ ವಿಧಾನಸೌಧದ ಮುಂಭಾಗ ಸಿಎಂ ಸಿದ್ದರಾಮಯ್ಯ, ಸುರ್ಜೆವಾಲಾ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ್ದರು. ಇಂದು ಕಾಂಗ್ರೆಸ್ ಕಿಸಾನ್ ಘಟಕದ ಮುಖಂಡರು, ಕಾರ್ಯಕರ್ತರು ಸೇರಿ ಬರ ಪರಿಹಾರ ನೀಡುವಲ್ಲಿ ಕೇಂದ್ರದ ತಾರತಮ್ಯ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ.
ಬೆಂಗಳೂರಿನ ಕಾರ್ಪೊರೇಷನ್ ವೃತ್ತದಲ್ಲಿ ಪ್ರಟಿಭಟನೆ ನಡೆಸುತ್ತಿರುವ ಮುಖಂಡರು, ಶೀಘ್ರವೇ ಬರ ಪರಿಹಾರ ರಿಲೀಸ್ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದು, ಸುಪ್ರೀಂಕೋರ್ಟ್ ಆದೇಶ ನೀಡಿದ್ರೂ ಬರ ಪರಿಹಾರ ನೀಡಿಲ್ಲ, ಒಕ್ಕೂಟ ವ್ಯವಸ್ಥೆಗೆ ಬಿಜೆಪಿ ಸರ್ಕಾರ ಗೌರವ ಕೊಡ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಬರ ಪರಿಹಾರ ರೀಲೀಸ್ ಆಗೋವರೆಗೂ ಕಾಂಗ್ರೆಸ್ ಸರಣಿ ಧರಣಿ ಮಾಡಲಿದೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : ಎಲೆಕ್ಷನ್ ಹೊತ್ತಲ್ಲೇ ಬೆಂಗಳೂರಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟೆ : 2 ದಿನಗಳಲ್ಲಿ 16 ಕಡೆ ರೇಡ್, ಕೆಜಿಗಟ್ಟಲೆ ಚಿನ್ನ- ಹಣ ವಶಕ್ಕೆ..!