ಬೆಂಗಳೂರು : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿ ಭಾಗ್ಯ ಸಿಗುವ ಸಾಧ್ಯತೆಯಿದೆ. ಇಂದು ಅಥವಾ ನಾಳೆ ಕಾರ್ಯಕರ್ತರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕರ್ತರ ಪಟ್ಟಿಯನ್ನು ಅಂತಿಮ ಮಾಡಿದ್ದಾರೆ.
ನಿಗಮ ಮಂಡಳಿಗಳಲ್ಲಿ ನಮಗೂ ಅವಕಾಶ ಕೊಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಹಾಗಾಗಿ ನಿಗಮ ಮಂಡಳಿ ನೇಮಕಾತಿಯಲ್ಲಿ
ಕಾರ್ಯಕರ್ತರಿಗೂ ಅವಕಾಶ ಸಿಗಬೇಕು ಎಂದು ಡಿಸಿಎಂ ಹೇಳಿದ್ದರು.
ಇದೀಗ ಲೋಕಸಭಾ ಚುನಾವಣೆ ಹತ್ತಿರ ಬರ್ತಾಯಿದೆ ಎಂದು ಕಾರ್ಯಕರ್ತರ ವಿಶ್ವಾಸ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಶಾಸಕರ ಹೆಸರು ಪ್ರಕಟ ಮಾಡಿದ್ದು, ಇಂದು ಅಥವಾ ನಾಳೆ ಕಾಂಗ್ರೆಸ್ ಕಾರ್ಯಕರ್ತರ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಇದನ್ನೂ ಓದಿ : ಸರ್ಕಾರಿ ಕೆಲಸ ಕೊಡಿಸೋದಾಗಿ ಯುವಕರಿಂದ ಹಣ ಪಡೆದು ವಂಚಿಸಿದ ದಂಪತಿ ಅರೆಸ್ಟ್..!
Post Views: 47