ಬೆಂಗಳೂರು : ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತೆ ಚೊಂಬು ಪ್ರೊಟೆಸ್ಟ್ ಮಾಡಿದ್ದು, ಖಾಲಿ ಚೊಂಬು ಹಿಡಿದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಗೋಬ್ಯಾಕ್ ಹೋರಾಟ ನಡೆಸ್ತಿದ್ದು, ಕಡಿಮೆ ಮೊತ್ತದ ಬರ ಪರಿಹಾರ ರಿಲೀಸ್ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ್ದು, ಖಾಲಿ ಚೊಂಬು ತಲೆ ಮೇಲೆ ಹೊತ್ತು ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸಾಥ್ ನೀಡಿದ್ದಾರೆ. ಹಾಗೆಯೇ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ನಾಯಕರು ಧಿಕ್ಕಾರದ ಘೋಷಣೆ ಹಾಕಿದ್ದಾರೆ.
18,174 ಕೋಟಿ ಬರ ಪರಿಹಾರ ಪೂರ್ತಿ ರಿಲೀಸ್ ಆಗೋವರೆಗೂ ಹೋರಾಟ ಮಾಡಲಿದ್ದೇವೆ ಎಂದು ಕಾಂಗ್ರೆಸ್ನ ಜೋಡೆತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ 3 ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ : ಲಕ್ಷಾಂತರ ಮೌಲ್ಯದ ಮರಗಳು ಸುಟ್ಟು ಭಸ್ಮ..!