Download Our App

Follow us

Home » ರಾಜಕೀಯ » ಇಂದು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ..!

ಇಂದು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ..!

ಬೆಂಗಳೂರು : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಮತ್ತೊಂದು ಪ್ರತಿಭಟನೆ ನಡೆಸಲಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಕಡಿಮೆ ಬರ ಪರಿಹಾರ ಹಣ ಬಿಡುಗಡೆ ಮಾಡಿದ ಹಿನ್ನಲೆಯಿಂದಾಗಿ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಕಡಿಮೆ ಮೊತ್ತದ ಬರ ಪರಿಹಾರ ವಿರೋಧಿಸಿ ಬೃಹತ್​ ಧರಣಿ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಶಾಸಕರು, ವಿಧಾನಪರಿಷತ್​ ಸದಸ್ಯರು, ಮುಖಂಡರು ಪ್ರತಿಭಟನೆ ಮಾಡಲಿದ್ದಾರೆ.

ಈ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿ, 223 ತಾಲೂಕುಗಳನ್ನು ಬರ ಪೀಡಿತವೆಂದು ಸರ್ಕಾರ ಘೋಷಿಸಿದೆ. 35,161 ಕೋಟಿ ನಷ್ಟವಾಗಿದೆ, 18,174 ಕೋಟಿ ಪರಿಹಾರ ನೀಡಿ ಎಂದು ಮನವಿ ಮಾಡಿತ್ತು. ಕೇಂದ್ರಕ್ಕೆ ವರದಿ ನೀಡಿದ ಬಳಿಕ ಟೀಂ ಬಂದು ಅಧ್ಯಯನ ಮಾಡಿತ್ತು. ಆದ್ರೆ ಈಗ ಬಿಡಿಗಾಸು ರಿಲೀಸ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರಕ್ಕೆ ಕರ್ನಾಟಕದ ಪರಿಸ್ಥಿತಿಯನ್ನ ತಿಳಿಸಲು‌ 2023 ಅಕ್ಟೋಬರ್​ 24ರಂದು ರಾಜ್ಯದ ಸಚಿವರುಗಳಾದ ಕೃಷಿ ಮತ್ತು ಕಂದಾಯ‌‌ ಸಚಿವರು ಹೋಗಿದ್ದರೆ, ಡಿಸೆಂಬರ್19ರಂದು ಸಿಎಂ, ಕಂದಾಯ ಸಚಿವರು ಇಬ್ಬರೂ ಭೇಟಿ ಮಾಡಿದ್ದರು. ಜ.20ರಂದು ಸಿಎಂ ಮತ್ತೆ ಪ್ರಧಾನಿಗಳ ಬಳಿ ಮನವಿ ಇಟ್ಟರು. ಮಾರ್ಗಸೂಚಿ ಅನ್ವಯ ನಾವು ಮನವಿ ಸಲ್ಲಿಸಿದ್ದೆವು ಎಂದರು.

ಇದನ್ನೂ ಓದಿ : ಜಪಾನ್​​ನಲ್ಲಿ ರಿಲೀಸ್​​ಗೆ ರೆಡಿಯಾದ ‘777 ಚಾರ್ಲಿ’ ಸಿನಿಮಾ..!

Leave a Comment

DG Ad

RELATED LATEST NEWS

Top Headlines

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಕವಿತಾ ಗೌಡ – ಮಗನ ಕಾಲಿನ ವಿಡಿಯೋ ಹಂಚಿಕೊಂಡ ಚಂದನ್..!

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದೀಗ ಮಗುವಿನ ಕಾಲಿನ ಒಂದು ವಿಡಿಯೋ ಶೇರ್

Live Cricket

Add Your Heading Text Here