ನವದೆಹಲಿ : ಕೇಂದ್ರದ ವಿರುದ್ಧ ರಾಜ್ಯದ ಸಿದ್ದರಾಮಯ್ಯ ಸರ್ಕಾರ ಅನುದಾನ ಸಮರ ಸಾರಿದೆ. ಕೇಂದ್ರಕ್ಕೆ ಬಿಸಿ ಮುಟ್ಟಿಸಲು ದೆಹಲಿ ಚಲೋ ಹಮ್ಮಿಕೊಂಡಿದ್ದು, ನಾಳೆ ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಖುದ್ದು ತಾವೇ ಜಂತರ್ ಮಂತರ್ ಸ್ಥಳ ವೀಕ್ಷಿಸಿ ಪರಿಶೀಲಿಸಿದ್ದಾರೆ.
ನಾಳೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ದಿಢೀರನೆ ದೆಹಲಿಗೆ ಭೇಟಿ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್, ರಾತ್ರೋರಾತ್ರಿ ಪ್ರತಿಭಟನೆ ನಡೆಸಲಿರುವ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಪ್ರತಿಭಟನೆಗೆ ವೇದಿಕೆ ಹಾಕುವ ಬಗ್ಗೆ ಸಲಹೆ ಸೂಚನೆ ಕೊಟ್ರು, ಈ ವೇಳೆ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಡಿ.ಕೆ.ಶಿವಕುಮಾರ್ಗೆ ಸಾಥ್ ನೀಡಿದ್ದಾರೆ.
ಇಂದು ಸಂಜೆಯೇ ಸಿಎಂ ಸಿದ್ದರಾಮ್ಯಯ್ಯ, ಮಂತ್ರಿಗಳು, MLAಗಳು, MLCಗಳು, ಸಂಸದರು ದೆಹಲಿಗೆ ತೆರಳಲಿದ್ದಾರೆ. ಕೇಂದ್ರದ ಅನುದಾನ ತಾರತಮ್ಯ ಖಂಡಿಸಿ ನಾಳೆ ಬೆಳಗ್ಗೆ 11 ಗಂಟೆ ನಂತರ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.
ಪ್ರತಿಭಟನಾ ನಡೆಸಲಿರುವ ಸ್ಥಳಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಸರ್ಕಾರದ ಹೋರಾಟ, ಕಾಂಗ್ರೆಸ್, ಬಿಜೆಪಿಗೆ ಸಂಬಂಧವಿಲ್ಲ. ಕೇಂದ್ರದ ಗಮನ ಸೆಳೆಯಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಅನುದಾನ ನಮ್ಮ ಹಕ್ಕು, ನಮಗೆ ಸಿಗಬೇಕಾದ ಪಾಲು ಕೊಡಿಸುವುದು ನಮ್ಮ ಕರ್ತವ್ಯ. ಕೇಂದ್ರ ಸರ್ಕಾರದ ಬಳಿ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ಮಗನಿಂದಲೇ ತಾಯಿಯ ಹ*ತ್ಯೆ ಕೇಸ್ಗೆ ಬಿಗ್ ಟ್ವಿಸ್ಟ್ : ತಾಯಿಯನ್ನು ಕೊಂ*ದಿದ್ದು ಮಗ ಅಲ್ಲ ಅಪ್ಪ..!