Download Our App

Follow us

Home » ರಾಜಕೀಯ » ಕೇಂದ್ರದ ವಿರುದ್ಧ ನಾಳೆ ಕಾಂಗ್ರೆಸ್​ನಿಂದ ದೆಹಲಿ ಚಲೋ ಪ್ರೊಟೆಸ್ಟ್..!

ಕೇಂದ್ರದ ವಿರುದ್ಧ ನಾಳೆ ಕಾಂಗ್ರೆಸ್​ನಿಂದ ದೆಹಲಿ ಚಲೋ ಪ್ರೊಟೆಸ್ಟ್..!

ನವದೆಹಲಿ : ಕೇಂದ್ರದ ವಿರುದ್ಧ ರಾಜ್ಯದ ಸಿದ್ದರಾಮಯ್ಯ ಸರ್ಕಾರ ಅನುದಾನ ಸಮರ ಸಾರಿದೆ. ಕೇಂದ್ರಕ್ಕೆ ಬಿಸಿ ಮುಟ್ಟಿಸಲು ದೆಹಲಿ ಚಲೋ ಹಮ್ಮಿಕೊಂಡಿದ್ದು, ನಾಳೆ ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್​ ಖುದ್ದು ತಾವೇ ಜಂತರ್​ ಮಂತರ್​ ಸ್ಥಳ ವೀಕ್ಷಿಸಿ ಪರಿಶೀಲಿಸಿದ್ದಾರೆ.

ನಾಳೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್​ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ದಿಢೀರನೆ ದೆಹಲಿಗೆ ಭೇಟಿ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್​, ರಾತ್ರೋರಾತ್ರಿ ಪ್ರತಿಭಟನೆ ನಡೆಸಲಿರುವ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಪ್ರತಿಭಟನೆಗೆ ವೇದಿಕೆ ಹಾಕುವ ಬಗ್ಗೆ ಸಲಹೆ ಸೂಚನೆ ಕೊಟ್ರು, ಈ ವೇಳೆ ಸಂಸದ ಡಿ.ಕೆ.ಸುರೇಶ್​, ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್​ ಡಿ.ಕೆ.ಶಿವಕುಮಾರ್​ಗೆ ಸಾಥ್​ ನೀಡಿದ್ದಾರೆ.

ಇಂದು ಸಂಜೆಯೇ ಸಿಎಂ ಸಿದ್ದರಾಮ್ಯಯ್ಯ, ಮಂತ್ರಿಗಳು, MLAಗಳು, MLCಗಳು, ಸಂಸದರು ದೆಹಲಿಗೆ ತೆರಳಲಿದ್ದಾರೆ. ಕೇಂದ್ರದ ಅನುದಾನ ತಾರತಮ್ಯ ಖಂಡಿಸಿ ನಾಳೆ ಬೆಳಗ್ಗೆ 11 ಗಂಟೆ ನಂತರ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ.

ಪ್ರತಿಭಟನಾ ನಡೆಸಲಿರುವ ಸ್ಥಳಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಮಾತನಾಡಿ​, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು‌ ಸರ್ಕಾರದ ಹೋರಾಟ, ಕಾಂಗ್ರೆಸ್, ಬಿಜೆಪಿಗೆ ಸಂಬಂಧವಿಲ್ಲ. ಕೇಂದ್ರದ ಗಮನ ಸೆಳೆಯಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಅನುದಾನ ನಮ್ಮ ಹಕ್ಕು, ನಮಗೆ ಸಿಗಬೇಕಾದ ಪಾಲು ಕೊಡಿಸುವುದು ನಮ್ಮ ಕರ್ತವ್ಯ. ಕೇಂದ್ರ ಸರ್ಕಾರದ ಬಳಿ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : ಮಗನಿಂದಲೇ ತಾಯಿಯ ಹ*ತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್​​ : ತಾಯಿಯನ್ನು ಕೊಂ*ದಿದ್ದು ಮಗ ಅಲ್ಲ ಅಪ್ಪ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here