ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾಜ್ಯಸಭೆ ಕಾದಾಟದಲ್ಲಿ 4 ಸೀಟ್ಗೆ ಐವರು ಅಭ್ಯರ್ಥಿಗಳ ಫೈಟ್ ನಡೆಯಲಿದೆ. ನಾಲ್ಕು ಸ್ಥಾನದ ಪೈಕಿ ಕಾಂಗ್ರೆಸ್ಗೆ 3, ಬಿಜೆಪಿಗೆ 1 ಸ್ಥಾನ ಫಿಕ್ಸ್ ಆಗಲಿದೆ.
ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್ ತಂತ್ರ ನಡೆಸಿದ್ದು, ಕಾಂಗ್ರೆಸ್ ಶಾಸಕರು ಹಿಲ್ಟನ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದು, ಸಿಎಂ ಸಿದ್ದು ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದೆ. ಪಕ್ಷದ ನಾಯಕರು ಶಾಸಕರಿಗೆ ಸಲಹೆ, ಸೂಚನೆ ನೀಡುತ್ತಿದ್ದಾರೆ.
ಬಹುತೇಕ ಕಾಂಗ್ರೆಸ್ನ ಎಲ್ಲಾ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದು, ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ್ ಸಭೆಗೆ ಆಗಮಿಸಿದ್ದಾರೆ. ಹಿರಿಯ ಶಾಸಕರು, ಶಾಸಕರಿಗೆ ವೋಟಿಂಗ್ ಮಾಡುವ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅಣಕು ವೋಟಿಂಗ್ ಮಾಡಿಸಿ ನಾಯಕರು ತರಬೇತಿ ನೀಡಿದ್ದು, ಬೆಳಗ್ಗೆ 10 ಗಂಟೆಗೆ ನಾಯಕರು ರೆಸಾರ್ಟ್ನಿಂದ ವಿಧಾನಸೌಧಕ್ಕೆ ಎಂಟ್ರಿ ಕೊಡಲಿದ್ದಾರೆ. ಈ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಕೂಡಾ ಸಾಥ್ ನೀಡಿದ್ದಾರೆ.
ಇಲ್ಲಿ ಐದನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಮೈತ್ರಿಗಳು ಕೂಡ ಪ್ಲಾನ್ ಮಾಡಿದೆ. ಬಿಜೆಪಿ ಅಭ್ಯರ್ಥಿ ಗೆಲುವಿಗೆ ಯಾವುದೇ ಅಡ್ಡಿ ಇಲ್ಲ, ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲುವಿಗೆ ಕಾರ್ಯತಂತ್ರ ನಡೆಸಿದ್ದಾರೆ. ಬಿಜೆಪಿ, ಜೆಡಿಎಸ್ನಲ್ಲಿ ಕೆಲವರು ಕೈಕೊಡುವ ಭೀತಿಯಿದ್ದು, ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ನಡೆಯೂ ನಿಗೂಢವಾಗಿದೆ.
ಮೈತ್ರಿ ನಾಯಕರು ನಿನ್ನೆ ಖಾಸಗಿ ಹೋಟೆಲ್ನಲ್ಲಿ ಸಭೆ ಮಾಡಿದ್ದಾರೆ. ಜನಾರ್ದನ ರೆಡ್ಡಿ ಸೇರಿ ಪಕ್ಷೇತರರಿಗೆ ಫೋನ್ ಮಾಡಿ ಬೆಂಬಲಿಸಲು ಮನವಿ ಮಾಡಿದ್ದು, ತಮ್ಮ ಎಲ್ಲಾ ಶಾಸಕರಿಗೂ ಕಡ್ಡಾಯವಾಗಿ ಹಾಜರಾಗುವಂತೆ ವಿಪ್ ಜಾರಿ ಮಾಡಿದ್ದಾರೆ. ಮಾಜಿ ಸಿಎಂ ಹೆಚ್ಡಿಕೆ ಕೆಲವು ಜೆಡಿಎಸ್ನ ಶಾಸಕರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ : ಇಂದು ರಾಜ್ಯಸಭೆ ಚುನಾವಣೆ : 4 ಸೀಟ್ಗೆ ಐವರು ಅಭ್ಯರ್ಥಿಗಳ ಫೈಟ್..!