ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರ ಕೇಸ್ ಪ್ರಕರಣ ಸಂಬಂಧಿಸಿದಂತೆ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಸಸ್ಪೆಂಡ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ MD ಪದ್ಮನಾಭ ಅವರನ್ನು ಅಮಾನತುಗೊಳಿಸಲಾಗಿದೆ. ಈಗಾಗಲೇ ಭ್ರಷ್ಟಾಚಾರ ಪ್ರಕರಣವನ್ನು ರಾಜ್ಯ ಸರ್ಕಾರ CID ವಹಿಸಿತ್ತು. ಶಿವಮೊಗ್ಗ ಮತ್ತು ಬೆಂಗಳೂರು ಎರಡು CID ಅಧಿಕಾರಿಗಳು ಪ್ರಕರಣವನ್ನು ತನಿಖೆ ಮಾಡುತ್ತಿದ್ದು, ನಿಗಮದ ಬಹುಕೋಟಿ ಗೋಲ್ಮಾಲ್ ಬಗೆದಷ್ಟೂ ಬಯಲಾಗ್ತಿದೆ.
ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಡೆತ್ನೋಟ್ ಆಧರಿಸಿ ಹಗರಣದ ಬಗ್ಗೆ ಸರ್ಕಾರ ತನಿಖೆ ತೀವ್ರಗೊಳಿತ್ತು. ಈ ತನಿಖೆಯಲ್ಲಿ ಹಗರಣದ ಬಹುಕೋಟಿ ಗೋಲ್ಮಾಲ್ ತಿಳಿದು ಬಂದಿದ್ದು, ನಕಲಿ ದಾಖಲೆ ಸೃಷ್ಟಿಸಿ ಹಣ ವರ್ಗಾಯಿಸಿ ದೊಡ್ಡ ನಷ್ಟ ಮಾಡಿರೋ ಆರೋಪ ವ್ಯಕ್ತವಾಗಿದೆ. ಈ ಸಂಬಂಧ ಈಗಾಗಲೇ ಬ್ಯಾಂಕ್ನ 6 ಮಂದಿ ಅಧಿಕಾರಿಗಳ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಇದನ್ನೂ ಓದಿ : ಮೇ. 31 ರವರೆಗೆ ಭವಾನಿ ರೇವಣ್ಣಗೆ ಟೆನ್ಷನ್ : ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್..!