Download Our App

Follow us

Home » ಜಿಲ್ಲೆ » ಉಡುಪಿಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ಭೇಟಿ..!

ಉಡುಪಿಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ಭೇಟಿ..!

ಉಡುಪಿ : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಿರ್ಣಾಯಕ ಘಟ್ಟದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿಯುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸೂರ್ಯಕುಮಾರ್ ಯಾದವ್ ಇದೀಗ ಉಡುಪಿಗೆ ಭೇಟಿ ನೀಡಿದ್ದಾರೆ.

ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಯಾದವ್​ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಕಾಪು ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ದಂಪತಿಯನ್ನು ದೇವಳದ ಆಡಳಿತ ಮಂಡಳಿ ಸನ್ಮಾನಿಸಿದ್ದಾರೆ.

ಇದೇ ವೇಳೆ ಟೀಮ್ ಇಂಡಿಯಾ ಆಟಗಾರನಿಗೆ ಸೂಕ್ತ ಭದ್ರತೆ ಒದಗಿಸಲು ಮಾರಿಗುಡಿ ಸುತ್ತ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು. ಉಡುಪಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್​ ವೈರಲ್ ಆಗುತ್ತಿದೆ.

ಇನ್ನು ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವವು ಸದ್ಯ ನಿರ್ಮಾಣ ಹಂತದಲ್ಲಿದೆ. ಸುಮಾರು 40 ಕೋಟಿ ರುಪಾಯಿ ವೆಚ್ಚದಲ್ಲಿ ಇಳಕಲ್ ಶಿಲೆಯನ್ನು ಬಳಸಿ ವಿಶಿಷ್ಟ ದೇವಾಲಯ ನಿರ್ಮಾಣವಾಗುತ್ತಿದೆ. ಈಗಾಗಲೇ ದೇವಸ್ಥಾನದ ಗರ್ಭಗುಡಿ, ಉಚ್ಛಂಗಿ ಗುಡಿ, ಸುತ್ತುಪೌಳಿ ಕಾಮಗಾರಿ ಶೇ.90 ಪೂರ್ಣಗೊಂಡಿದ್ದು, ಮುಂಬರುವ ಮಾರ್ಚ್ 02ರಂದು ಬ್ರಹ್ಮ ಕಲಶ ಮಹೋತ್ಸವ ನಡೆಯಲಿದೆ. ಸೂರ್ಯಕುಮಾರ್ ಯಾದವ್ ದೇವಸ್ಥಾನ ನಿರ್ಮಾಣ, ಶಿಲ್ಪಕಲೆಯ ಕೆತ್ತನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

 

 

 

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here