ಬೆಂಗಳೂರು : ರೈಲಿನಲ್ಲಿ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಸರಗಳ್ಳರು ಅರೆಸ್ಟ್ ಆಗಿದ್ದಾರೆ. ಬಾಲಾಜಿ ಹಾಗೂ ಕಮಲನಾಥನ್ ಬಂಧಿತ ಆರೋಪಿಗಳಾಗಿದ್ದಾರೆ.
ಜನವರಿ 18 ರಂದು ರೈಲಿನಲ್ಲಿ ಮಹಿಳೆಯ 29 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತು ಆರೋಪಿಗಳು ಪರಾರಿಯಾಗಿದ್ದರು. ಈ ಘಟನೆ ಕೋಲಾರದ ಬಿಸಾನತ್ತಂ ರೈಲ್ವೆ ನಿಲ್ದಾಣದಲ್ಲಿ ನಡೆದಿತ್ತು.
ಖತರ್ನಾಕ್ ಕಳ್ಳರು ಸರ ಕಿತ್ತು ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪರಾರಿಯಾಗಿದ್ದರು. ಪೊಲೀಸರು ವಿಶೇಷ ತಂಡದ ಮೂಲಕ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಬಂಧಿತರಿಂದ 4.34 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ನಕಲಿ ದಾಖಲೆ ಸೃಷ್ಟಿ : ಸಿಎಂ ಸಿದ್ದರಾಮಯ್ಯ ಆಪ್ತ ಎಂ.ಕೆ ಸೋಮಶೇಖರ್ ವಿರುದ್ಧ FIR..!
Post Views: 734