Download Our App

Follow us

Home » ಸಿನಿಮಾ » ಬಳ್ಳಾರಿ ಜೈಲಿನಲ್ಲಿರುವ ದರ್ಶನ್​ಗೆ ತೀವ್ರ ಬೆನ್ನು ನೋವು.. ನಡೆಯಲೂ ಸಾಧ್ಯವಾಗದೆ ಒದ್ದಾಟ..!

ಬಳ್ಳಾರಿ ಜೈಲಿನಲ್ಲಿರುವ ದರ್ಶನ್​ಗೆ ತೀವ್ರ ಬೆನ್ನು ನೋವು.. ನಡೆಯಲೂ ಸಾಧ್ಯವಾಗದೆ ಒದ್ದಾಟ..!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್​ಗೆ ಜೈಲು ನರಕವಾಗಿ ಪರಿಣಮಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರಂಭದ ದಿನಗಳನ್ನು ಆರಾಮವಾಗಿ ಕಳೆದಿದ್ದ ದರ್ಶನ್​ಗೆ ಈಗ ಜೈಲು ವಾಸದ ನರಕಯಾತನೆ ನಿಜಕ್ಕೂ ಅರಿವಿಗೆ ಬರುತ್ತಿರುವಂತಿದೆ.  ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಮೂಲಗಳ ಪ್ರಕಾರ, ದರ್ಶನ್​ಗೆ ಕೂರುವುದು-ಏಳುವುದು, ಮಹಾ ಸಮಸ್ಯೆಯಾಗಿದೆ. ದಾಸ ನಡೆಯಲು ಸಹ ಬಹಳ ಕಷ್ಟಪಡುವ ಸ್ಥಿತಿ ತಲುಪಿದ್ದಾರೆ.

ದರ್ಶನ್​ರ ಬೆನ್ನಿನ ಎಲ್​1 ಹಾಗೂ ಎಲ್​5 ಭಾಗದಲ್ಲಿ ತೀವ್ರವಾಗಿ ನೋವಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯ ಇದೆಯೆಂದು ವೈದ್ಯರು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನೋವು ಶಮನಕ್ಕೆ ದರ್ಶನ್​ಗೆ ಡಾಕ್ಟರ್​​​​ಗಳು ಕೆಲ ವ್ಯಾಯಾಮವನ್ನು ಹೇಳಿ ಕೊಟ್ಟಿದ್ದಾರೆ.

ಇನ್ನು ದರ್ಶನ್ ಜಾಮೀನಿನಾಗಿ ಅರ್ಜಿ ಸಲ್ಲಿಸಿದ್ದರು. 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಅರ್ಜಿ ವಜಾ ಆಗಿದೆ. ಇದೀಗ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅಲ್ಲಿಯೂ ಸಹ ಜಾಮೀನು ಸಿಗುವುದು ಕಷ್ಟ ಎನ್ನಲಾಗಿದೆ. ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಜಾಮೀನು ಪಡೆಯುವ ನಿರೀಕ್ಷೆ ಇದೆ. ಅಲ್ಲದೆ ದರ್ಶನ್, ಬಳ್ಳಾರಿಯಲ್ಲಿ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದು, ನನ್ನನ್ನು ಬೆಂಗಳೂರಿಗೆ ಕಳಿಸಿ, ನಾನು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತೇನೆ ಎಂದಿದ್ದಾರೆ

ಇದನ್ನೂ ಓದಿ : ಮಂಗಳೂರು : ಮನೆಯ ಅಡುಗೆ ಕೋಣೆಗೆ ಏಕಾಏಕಿ ನುಗ್ಗಿದ ಚಿರತೆ..!

Leave a Comment

DG Ad

RELATED LATEST NEWS

Top Headlines

BWSSB ನಿರ್ಲಕ್ಷ್ಯಕ್ಕೆ ನಿವಾಸಿಗಳ ಪರದಾಟ – ಜಲಮಂಡಳಿ ಬೇಜವಾಬ್ದಾರಿತನಕ್ಕೆ ಸ್ಥಳೀಯರ ಆಕ್ರೋಶ..!

ಬೆಂಗಳೂರು : ಕಾವೇರಿ ಪೈಪ್ ಲೈನ್ ಒಡೆದು ಮನೆಯೊಳಗೆ ನುಗ್ಗಿದ ನೀರು ಘಟನೆ ಬನಶಂಕರಿ 5ನೇ ಅಂತ ವಸಂತಪುರದಲ್ಲಿ ನಡೆದಿದೆ. BWSSB ನಿರ್ಲಕ್ಷ್ಯದಿಂದ ನಿವಾಸಿಗಳು ಪರದಾಡುವಂತಹ ಸ್ಥಿತಿ

Live Cricket

Add Your Heading Text Here