ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣ ತನಿಖೆ ಹಂತದಲ್ಲಿ ಇರುವಾಗಲೇ SPP ಬದಲಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ಹಾಕಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಸದ್ಯ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
SPP ಬದಲಾವಣೆ ಬಗ್ಗೆ ಹಬ್ಬಿದ್ದ ವದಂತಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ ಅವರು, SPP ಬದಲಾವಣೆ ಮಾಡಿ ಎಂದು ಯಾರು ನನ್ನ ಭೇಟಿ ಮಾಡಿಲ್ಲ. ತನಿಖೆ ಮುಕ್ತವಾಗಿ, ಸ್ವತಂತ್ರವಾಗಿ ನಡೆಯುತ್ತಿದೆ. ಯಾವ ಸಚಿವರು ಒತ್ತಡ ಹಾಕಿದ್ರೂ ಕೇಳಲ್ಲ ಎಂದಿದ್ದಾರೆ.
ಇನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಅವರಿಗೆ ಸಂಪೂರ್ಣವಾಗಿ ಸ್ವಾತಂತ್ರ್ಯ ಕೊಡಲಾಗಿದೆ ಎಂದಿದ್ದಾರೆ. ಈ ಮೂಲಕ ಪ್ರಸನ್ನಕುಮಾರ್ ಬದಲಾವಣೆ ಇಲ್ಲ ಎಂಬುದನ್ನು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ದಾವಣಗೆರೆಯಲ್ಲಿ ಭಯಾನಕ ರಸ್ತೆ ಅಪಘಾತ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
Post Views: 67