ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ ತನಿಖೆ ವೇಳೆ ಪೊಲೀಸರು ಆರೋಪಿ ನಟ ದರ್ಶನ್ ಬಳಿ 40 ಲಕ್ಷ ರು. ನಗದು ಜಪ್ತಿ ಮಾಡಿದ್ದರು. ವಿಚಾರಣೆ ವೇಳೆ ಈ ಹಣವನ್ನು ಮಾಜಿ ಉಪಮೇಯರ್ ಮೋಹನ್ ರಾಜ್ ಬಳಿ ಪಡೆದಿದ್ದಾಗಿ ದರ್ಶನ್ ಹೇಳಿಕೆ ನೀಡಿದ್ದರು. ಹೀಗಾಗಿ ದರ್ಶನ್ ಅವರಿಗೆ ಹಣ ಕೊಟ್ಟ ಆರೋಪ ಎದುರಿಸುತ್ತಿದ್ದ ಮೋಹನ್ ರಾಜ್ ಅವರು ಪೊಲೀಸರ ವಿಚಾರಣೆಗೆ ಹಾಜರಾಗಿದ್ದರು.
ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಇಂಚಿಂಚೂ ಕೆದಕುತ್ತಿರುವ ಪೊಲೀಸರು, ಮೋಹನ್ ರಾಜ್ ಬೆನ್ನಲ್ಲೇ ಇನ್ನಿಬ್ಬರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಂದು ಮತ್ತೆ ಇಬ್ಬರ ವಿಚಾರಣೆ ನಡೆಸಲಿರುವ ಪೊಲೀಸರು ಬೆಂಗಳೂರು ನಗರದ ಪ್ರಭಾವಿ MLA ಕಾರು ಡ್ರೈವರ್ ಕಾರ್ತಿಕ್ ಹಾಗೂ ಡೆವಿಲ್ ಸಿನಿಮಾದ ಡೈರೆಕ್ಟರ್ ಮಿಲನ ಪ್ರಕಾಶ್ಗೆ ನೋಟಿಸ್ ನೀಡಿದ್ದಾರೆ.
ACP ಚಂದನ್ ಕುಮಾರ್ ನೇತೃತ್ವದಲ್ಲಿ ಬಸವೇಶ್ವರನಗರ ಠಾಣೆ ಕಟ್ಟಡದಲ್ಲಿರುವ ACP ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ಡೆವಿಲ್ ಸಿನಿಮಾದ ಶೂಟಿಂಗ್ಗೆ ತೆರಳಿದ ವೇಳೆ ದರ್ಶನ್ರನ್ನು ಅರೆಸ್ಟ್ ಮಾಡಲಾಗಿತ್ತು. ಹೀಗಾಗಿ ಹಣಕಾಸಿನ ವ್ಯವಹಾರ ಸಂಬಂಧ ACP ಚಂದನ್ ಇನ್ನಿಬ್ಬರ ವಿಚಾರಣೆ ನಡೆಸಲಿದ್ದಾರೆ.
ಇದನ್ನೂ ಓದಿ : ಉತ್ತರ ಕನ್ನಡ, ಕರಾವಳಿ ಭಾಗದಲ್ಲಿ ಮುಂದುವರೆದ ವರುಣನ ಆರ್ಭಟ : ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ..!