Download Our App

Follow us

Home » ಮೆಟ್ರೋ » ಹುಚ್ಚಾಟ ಮೆರೆದ ದರ್ಶನ್ ಅಭಿಮಾನಿಗಳಿಗೆ ಪೊಲೀಸರ ಲಾಠಿಜಾರ್ಜ್..!

ಹುಚ್ಚಾಟ ಮೆರೆದ ದರ್ಶನ್ ಅಭಿಮಾನಿಗಳಿಗೆ ಪೊಲೀಸರ ಲಾಠಿಜಾರ್ಜ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿ ಪರಪ್ಪನ ಅಗ್ರಹಾರ ಸೇರಿದ್ದ ನಟ ದರ್ಶನ್​ಗೆ ರಾಜ್ಯಾತಿಥ್ಯ ಕೊಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದ ಬೆನ್ನಲ್ಲೇ ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ಹೊತ್ತಲ್ಲೇ ದರ್ಶನ್​ರ ಹಳೆಯ ಸಿನಿಮಾಗಳನ್ನು ಮರು ರಿಲೀಸ್ ಮಾಡಲಾಗಿದೆ.

ಇಂದು ದರ್ಶನ್ ನಟನೆಯ ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗಿದೆ. ಬೆಳಗ್ಗಿನಿಂದಲೇ ದರ್ಶನ್ ಅಭಿಮಾನಿಗಳು, ದರ್ಶನ್​ರ ಆರೋಪಿ ಸಂಖ್ಯೆ ಹೊಂದಿರುವ ಕಟೌಟ್, ಬ್ಯಾನರ್​ಗಳನ್ನು ಚಿತ್ರಮಂದಿರದ ಹೊರಗೆ ಹಾಕಿದ್ದಾರೆ. ಅದರ ಜೊತೆಗೆ ದರ್ಶನ್, ಜೈಲಿನಲ್ಲಿ ಸಿಗರೇಟು ಸೇದುತ್ತಾ ಕೂತಿದ್ದ ಪೋಸ್ಟರ್ ಕೂಡ ಹಾಕಿದ್ದಾರೆ.

ಇಷ್ಟು ಮಾತ್ರವಲ್ಲದೇ ದರ್ಶನ್​​ ಅಭಿಮಾನಿಗಳು, ಪ್ರಸನ್ನ ಥಿಯೇಟರ್​​ ಹೊರಗಡೆ ಅವಾಚ್ಯ ಶಬ್ದಗಳನ್ನು ಬಳಸಿ ಸಂಭ್ರಮ ಮಾಡುತ್ತಿದ್ದರು. ಹೀಗಾಗಿ ಹುಚ್ಚಾಟ ಮೆರೆದ ಅಭಿಮಾನಿಗಳನ್ನು ಚದುರಿಸಲು ಕೆಪಿ ಅಗ್ರಹಾರ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ಇದನ್ನೂ ಓದಿ : ವಿನಯ್​​ರಾಜ್​​ ಕುಮಾರ್​​ ನಟನೆಯ ‘ಪೆಪೆ’ ಚಿತ್ರ ಇಂದು ರಾಜ್ಯಾದ್ಯಂತ ಭರ್ಜರಿ ರಿಲೀಸ್ – ದೊಡ್ಮನೆ ಕುಡಿ ಆ್ಯಕ್ಟಿಂಗ್​ಗೆ ಫ್ಯಾನ್ಸ್ ಫುಲ್ ಫಿದಾ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here