Download Our App

Follow us

Home » ಸಿನಿಮಾ » ನಟ ದರ್ಶನ್​​ಗೆ ಮತ್ತೆ ಸಂಕಷ್ಟ – ಆರ್​​.ಆರ್​​​ ನಗರ ​ಠಾಣೆಯಲ್ಲಿ ದೂರು ದಾಖಲು..!

ನಟ ದರ್ಶನ್​​ಗೆ ಮತ್ತೆ ಸಂಕಷ್ಟ – ಆರ್​​.ಆರ್​​​ ನಗರ ​ಠಾಣೆಯಲ್ಲಿ ದೂರು ದಾಖಲು..!

ಬೆಂಗಳೂರು : ನಟ ದರ್ಶನ್‌ ವಿರುದ್ಧ ದೂರುಗಳ ಮೇಲೆ ದೂರು ದಾಖಲಾಗುತ್ತಿದೆ. ಇಂದು ಅವರ ಹೇಳಿಕೆ ಖಂಡಿಸಿ ಆರ್.ಆರ್ ನಗರ  ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಈ ಹಿನ್ನೆಲೆ ಆರ್​​.ಆರ್​​​.ನಗರ ಪೊಲೀಸರು ದರ್ಶನ್‌ ಮೇಲೆ NCR ದಾಖಲು ಮಾಡಿದ್ದಾರೆ. ದರ್ಶನ್ ಅವರ ಮಾತು ಪ್ರಭಾವಿ ಸಮುದಾಯದ ನಾಯಕರ ಬಗ್ಗೆ ಅವಹೇಳನ ಮಾಡಿದಂತಿದೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ಕಾಟೇರ ಟೈಟಲ್‌ ವಿವಾದದಲ್ಲಿ ನಟ ದರ್ಶನ್, ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ವಾಗ್ವಾದವೇ ನಡೆದಿತ್ತು. ಈ ವಾಕ್ಸಮರದ ಹಿನ್ನೆಲೆಯಲ್ಲಿ ಗಣೇಶ್ ಗೌಡ ಹಾಗೂ ಜಗದೀಶ್ ಎಂಬುವವರು ಆರ್.ಆರ್ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಟ ದರ್ಶನ್‌ ಅವರು ರಾಜ್ಯದ ಪ್ರಭಾವಿ ಸಮುದಾಯದ ನಾಯಕರ ಬಗ್ಗೆ ಮಾತನಾಡಿದ್ದಾರೆ. ವೇದಿಕೆ ಮೇಲೆ ಹೆಣ್ಣು ಮಕ್ಕಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ. ದರ್ಶನ್‌ಗೆ ಹೆಣ್ಣು ಮಕ್ಕಳು ಎಂದರೆ ಆಟಿಕೆಯ ವಸ್ತುಗಳ ರೀತಿ ಬಳಸಿ ಬಿಸಾಡುವಂತಾಗಿದೆ. ಇದು ಈ ರಾಜ್ಯದ ಮತ್ತು ದೇಶದ ಮಹಿಳಾ ಕುಲಕ್ಕೆ ಮಹಾ ಅಪಮಾನ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ಇದರ ಜೊತೆಗೆ ಒಕ್ಕಲಿಗ ನಾಯಕರ ವಿರುದ್ಧ ಚುನಾವಣೆಯ ಸಂದರ್ಭದಲ್ಲಿ ಅಪಹಾಸ್ಯ ಮಾಡಿದ್ದಾರೆ. ಇದರಿಂದ ಒಂದು ಸಮುದಾಯ ರೊಚ್ಚಿಗೇಳುವ ಮುಂಚೆ ಕಾನೂನು ಕ್ರಮ ಕೈ ಗೊಳ್ಳುವಂತೆ ಒತ್ತಾಯಿಸಲಾಗಿದೆ. ಆರ್.ಆರ್ ನಗರ ಠಾಣೆಯ ಪೊಲೀಸರು ಈ ಸಂಬಂಧ ಎನ್‌ಸಿಆರ್ ದಾಖಲು ಮಾಡಿದ್ದಾರೆ.

ಇದನ್ನೂ ಓದಿ : ತುಮಕೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ರೇಡ್..!

Leave a Comment

DG Ad

RELATED LATEST NEWS

Top Headlines

ವಾಲ್ಮೀಕಿ ಹಗರಣ – ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ 10 ಕೆ.ಜಿ‌ ಚಿನ್ನದ ಬಿಸ್ಕೆಟ್ SIT ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಸಂಬಂಧ ತನಿಖೆಯನ್ನ SIT ಚುರುಕುಗೊಳಿಸಿದೆ. ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ ಬರೋಬ್ಬರಿ 10 ಕೆ.ಜಿ‌ ಚಿನ್ನದ

Live Cricket

Add Your Heading Text Here