ಬೆಂಗಳೂರು : ಇಡೀ ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಸೇರಿ ಈಗಾಗಲೇ ಬರೋಬ್ಬರಿ ಒಂದು ತಿಂಗಳು ಕಳೆದಿದೆ. ಕಳೆದೆರಡು ದಿನಗಳ ಹಿಂದೆ ಡಿ ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್, ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿತ್ತು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಲ್ಲಿ ಹಲವು ಸೀಕ್ರೆಟ್ಗಳು ಬಯಲಾಗಿವೆ. ಕೊಲೆಯಾದ ರೇಣುಕಾಸ್ವಾಮಿ ಪೋಸ್ಟ್ ಮಾರ್ಟಂ ರಿಪೋರ್ಟ್ ಚೆಂಜ್ ಮಾಡಲೂ ದರ್ಶನ್ ಗ್ಯಾಂಗ್ ಸಂಚು ರೂಪಿಸಿತ್ತಂತೆ ಎಂದು ತಿಳಿದು ಬಂದಿದೆ. ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಗೆ ಕೋಟಿ ಕೋಟಿ ಆಫರ್ ನೀಡಿದ್ದ ಡಿ ಗ್ಯಾಂಗ್, ಹಾರ್ಟ್ ಅಟ್ಯಾಕ್ನಿಂದ ಸಾವು ಎಂದು ರಿಪೋರ್ಟ್ ನೀಡುವಂತೆ ತಿಳಿಸಿತ್ತು ಎಂಬುದು ಬಯಲಾಗಿದೆ.
ಇನ್ನು ರೇಣುಕಾಸ್ವಾಮಿ ಪೊಸ್ಟ್ ಮಾರ್ಟಂ ರಿಪೋರ್ಟ್ ಪೊಲೀಸರ ಕೈ ಸೇರಿದೆ. ವಿಕ್ಟೋರಿಯಾ ಆಸ್ಪತ್ರೆ ಪೋಸ್ಟ್ಮಾರ್ಟಂ ರಿಪೋರ್ಟ್ನಲ್ಲಿ ಸ್ಫೋಟಕ ಮಾಹಿತಿ ಬಯಲಾಗಿದ್ದು, ರೇಣುಕಾಸ್ವಾಮಿಗೆ ಹೇಗೆಲ್ಲಾ ಚಿತ್ರಹಿಂಸೆ ನೀಡಿದ್ದರು ಎಂಬುದು ತಿಳಿದು ಬಂದಿದೆ.
ಚಿತ್ರಹಿಂಸೆ ನೀಡಿ ಹೊಡೆದು ಕೊಂದ ಬಗ್ಗೆ ರಿಪೋರ್ಟ್ ನೀಡಿದ ವೈದ್ಯರು , ರೇಣುಕಾಸ್ವಾಮಿಗೆ 4-5 ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಮನಸೋ ಇಚ್ಚೆ ಹೊಡೆದ ರಭಸಕ್ಕೆ ದೇಹದ 4-5 ಮೂಳೆಗಳು ಮುರಿತವಾಗಿದ್ದು, ತೀವ್ರ ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ ಎಂಬುದು ಈ ರಿಪೋರ್ಟ್ನಲ್ಲಿದೆ. ಇನ್ನು ಈ ಪ್ರಬಲ ಸಾಕ್ಷಿ ನೋಡಿದ್ರೆ ದರ್ಶನ್ – ಪವಿತ್ರಾ ಗ್ಯಾಂಗ್ಗೆ ಶಿಕ್ಷೆಯಾಗೋದು ಗ್ಯಾರಂಟಿಯಾಗಿದ್ದು, 6 ತಿಂಗಳು ರಿಲೀಸ್ ಆಗೋದು ಡೌಟ್ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ದರ್ಶನ್ ಜೊತೆ ಜೈಲು ಸೇರಿದ್ದ 4ನೇ ಆರೋಪಿ ರಘು ತಾಯಿ ನಿಧನ..!