Download Our App

Follow us

Home » ಅಪರಾಧ » ದರ್ಶನ್​ಗೆ ಜೈಲಲ್ಲಿ ರಾಜಾತಿಥ್ಯ, ಕುಖ್ಯಾತ ರೌಡಿ ಜೊತೆ ಬಿಂದಾಸ್​ ಫೋಸು.. ವಿಡಿಯೋ ಕಾಲ್ ಮಾಡಿದ್ಯಾರು?

ದರ್ಶನ್​ಗೆ ಜೈಲಲ್ಲಿ ರಾಜಾತಿಥ್ಯ, ಕುಖ್ಯಾತ ರೌಡಿ ಜೊತೆ ಬಿಂದಾಸ್​ ಫೋಸು.. ವಿಡಿಯೋ ಕಾಲ್ ಮಾಡಿದ್ಯಾರು?

ಬೆಂಗಳೂರು : ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಅವರ ಜೈಲು ವಾಸ ಕಷ್ಟಕರವಾಗಿದೆ ಎಂದು ಇಷ್ಟು ದಿನ ಊಹಿಸಲಾಗಿತ್ತು. ಆದರೆ ಈಗ ಕೆಲವು ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ. ಕೊಲೆ ಆರೋಪ ಹೊತ್ತಿರುವ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಕಲ ಸೌಕರ್ಯಗಳು ಸಿಗುತ್ತಿವೆ ಎಂಬುದಕ್ಕೆ ಒಂದಷ್ಟು ಸಾಕ್ಷಿಗಳು ಲಭ್ಯವಾಗುತ್ತಿವೆ. ಸ್ಪೆಷಲ್​ ಬ್ಯಾರಕ್​ನಲ್ಲಿ ಇರುವ ದರ್ಶನ್​ ಅವರಿಗೆ ವಿಡಿಯೋ ಕಾಲ್​ ಸೌಲಭ್ಯವನ್ನೂ ನೀಡಲಾಗಿದೆ. ಅದಕ್ಕೆ ಸಾಕ್ಷಿಯಾಗಿರುವ ವಿಡಿಯೋ ಈಗ ವೈರಲ್​ ಆಗಿದೆ.

ದರ್ಶನ್​ ವಿಡಿಯೋ ಕಾಲ್​ನಲ್ಲಿ ಮಾತನಾಡಿದ್ದು, ‘ಊಟ ಆಯ್ತಾ? ನಾನು ಆರಾಮಾಗಿದ್ದೀನಿ’ ಎಂದು ಮಾತುಕತೆ ನಡೆಸಿದ್ದಾರೆ. ರೆಡ್ಡಿ ಎಂಬಾತ‌ನ ಸ್ಟೇಟಸ್​ನಲ್ಲಿ ಈ ವಿಡಿಯೋ ಹರಿದಾಡಿದೆ. ವೈರಲ್​ ಆಗಿರುವ ದರ್ಶನ್​ ಅವರ ವಿಡಿಯೋ ಕಾಲ್​ನಲ್ಲಿ ಇರುವವನು ಬ್ಯಾಡರಹಳ್ಳಿ ರೌಡಿಶೀಟರ್ ಜಾನಿ ಅಲಿಯಾಸ್​ ಜನಾರ್ದನ್ ಪುತ್ರ ಸತ್ಯ. ವಿಡಿಯೋ ಕಾಲ್ ಮಾಡಿ ದರ್ಶನ್ ಅವರನ್ನು ತೋರಿಸಿರುವವನು ಕೂಡ ರೌಡಿಶೀಟರ್ ಮಾರ್ಕೆಟ್ ಧರ್ಮ.

ಜಾನಿ ಮಗ ಸತ್ಯ ಕೂಡ ಇತ್ತೀಚೆಗೆ ಜೈಲಿಗೆ ಹೋಗಿ ಬಂದಿದ್ದ. ಕಾಲೇಜ್ ವಿದ್ಯಾರ್ಥಿಗಳಿಗೆ ಉಲ್ಟಾ ಮಚ್ಚಲ್ಲಿ ಸತ್ಯ ಹೊಡೆದಿದ್ದ. ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಹಲ್ಲೆ ನಡೆದಿತ್ತು. ಜೈಲಿಗೆ ಹೋಗಿದ್ದ ಸತ್ಯ ಸದ್ಯ ಜಾಮೀನನ ಮೇಲೆ ಹೊರಗೆ ಬಂದಿದ್ದ. ಹೊರಗೆ ಬಂದವನು ಇತ್ತೀಚೆಗೆ ಮಾರ್ಕೆಟ್ ಧರ್ಮನಿಗೆ ವಿಡಿಯೋ ಕಾಲ್ ಮಾಡಿದ್ದ‌. ‘ದರ್ಶನ್ ನಮ್ ಸೆಲ್ ಪಕ್ಕದಲ್ಲೇ ಇರೋದು, ಇರು ತೋರಿಸ್ತಿನಿ’ ಎಂದು ಮಾರ್ಕೆಟ್​ ಧರ್ಮ, ದರ್ಶನ್ ಕೈಯಲ್ಲಿ ಹಾಯ್ ಹೇಳಿಸಿದ್ದ. ಅದನ್ನು ರೆಕಾರ್ಡ್ ಮಾಡಿಕೊಂಡ ಸತ್ಯ ತನ್ನ ಏರಿಯಾದಲ್ಲಿ ಬಿಲ್ಡಪ್ ಕೊಟ್ಟಿದ್ದ. ಕಲಾಸಿಪಾಳ್ಯದ ಕೆಲ ಹುಡುಗರಿಗೂ ವಿಡಿಯೋ ಕಳಿಸಿದ್ದ‌. ಹಾಗಾಗಿ ಈ ವಿಡಿಯೋ ವೈರಲ್​ ಆಗಿದೆ.

ಇನ್ನು, ವೈರಲ್​ ಫೋಟೋದಲ್ಲಿ ದರ್ಶನ್​ ಜೊತೆ ಇರುವುದು ಕೂಡ ರೌಡಿಶೀಟರ್​ಗಳು. ವಿಲ್ಸನ್​ ಗಾರ್ಡನ್​ ನಾಗ, ಕುಳ್ಳ ಸೀನಾ ಮುಂತಾದ ವ್ಯಕ್ತಿಗಳ ಸಂಪರ್ಕವನ್ನು ದರ್ಶನ್ ಪಡೆದುಕೊಂಡಿದ್ದಾರೆ. ಅವರ ಜೊತೆ ಜೈಲಿನ ಗಾರ್ಡನ್​ನಲ್ಲಿ ಟೀ ಕುಡಿದು, ಸಿಗರೇಟ್​ ಸೇದಿದ ಫೋಟೋ ಎಲ್ಲ ಕಡೆ ಹರಿದಾಡಿದೆ. ಜೈಲಿನ ನಿಯಮಗಳು ಉಲ್ಲಂಘನೆ ಆಗಿರುವ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ.

ಇದನ್ನೂ ಓದಿ : ಜೈಲಿನಲ್ಲಿ ಬಿಂದಾಸ್​ ಆಗಿರೊ ಕಿಲ್ಲರ್ ಸ್ಟಾರ್ ದರ್ಶನ್ – ಕೈಯಲ್ಲಿ ಸಿಗರೇಟ್, ಕಾಫಿ ಮಗ್ ಹಿಡಿದಿರೋ ಫೋಟೋ ವೈರಲ್..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here