ಹುಬ್ಬಳ್ಳಿ : ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಗಂಭೀರ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.
ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಹೊಸ ವಿಷಯಗಳು ಹೊರಬರುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಹಲವು ಆರೋಪಿಗಳನ್ನು ಬಂಧಿಸಿದ್ದು ಮಹಜರು ಪ್ರಕ್ರಿಯೆ ಸಹ ಬಹುತೇಕ ಮುಗಿದೆ. ರೇಣುಕಾ ಸ್ವಾಮಿಯನ್ನು ಅಪಹರಣ ಮಾಡಲಾಗಿದ್ದ ಚಿತ್ರದುರ್ಗಕ್ಕೂ ತೆರಳಿ ಅಲ್ಲಿಯೂ ಮಹಜರು ಮಾಡಲಾಗಿದೆ.
ಇದನ್ನೂ ಓದಿ : ರೇಣುಕಾಸ್ವಾಮಿ ಮ*ರ್ಡರ್ ಕೇಸ್ – ದರ್ಶನ್, ಪವಿತ್ರಾಗೌಡ ಸೇರಿ 14 ಮಂದಿಯ ಕ್ರೈಂ ರೆಕಾರ್ಡ್ ಓಪನ್..!