Download Our App

Follow us

Home » ಅಪರಾಧ » ದರ್ಶನ್‌, ಪವಿತ್ರಾ ಗೌಡಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ..!

ದರ್ಶನ್‌, ಪವಿತ್ರಾ ಗೌಡಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

ಸರ್ಕಾರದ ಅಭಿಯೋಜಕ ಎಸ್​ಪಿಪಿ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ಅವರ ಸುದೀರ್ಘ ವಾದ – ಪ್ರತಿವಾದ ಆಲಿಸಿದ 57ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ. ಜೈಶಂಕರ್ ಅವರು ಅ.14ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು. ಇದೀಗ ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ.

ಇನ್ನು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ A-13 ದೀಪಕ್​ , A-8 ರವಿಶಂಕರ್​ಗೆ ಜಾಮೀನು ಮಂಜೂರು ಮಾಡಿ, A-11 ನಾಗರಾಜು ಜಾಮೀನು ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದೆ. ಉಳಿದ ಮೂವರ ಆರೋಪಿಗಳಾದ ಲಕ್ಷ್ಮಣ್, ಪ್ರದೋಷ್​, ಜಗದೀಶ್​ ಜಾಮೀನು ಆದೇಶ ಅ.​16ಕ್ಕೆ ಕಾಯ್ದಿರಿಸಿದೆ.

ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಜೂನ್‌ 11ರಂದು ದರ್ಶನ್ ಹಾಗೂ ಇತರರನ್ನು ಬಂಧಿಸಲಾಗಿತ್ತು. ಸದ್ಯ ದರ್ಶನ್‌ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೆಪ್ಟೆಂಬರ್‌ 21ರಂದು ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.
ಪ್ರಾಸಿಕ್ಯೂಷನ್‌ ಪರ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಪ್ರಸನ್ನಕುಮಾರ್‌ ವಾದ ಮಂಡಿಸಿದ್ದಾರೆ. ದರ್ಶನ್‌ ಪರ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದಿಸಿದ್ದರು.

Leave a Comment

DG Ad

RELATED LATEST NEWS

Top Headlines

3-4 ಸಾವಿರ ಸೈಟ್​ಗಳ ಅಕ್ರಮ ಆಗಿದೆ, ED ಯಾವ ದಾಖಲೆ ಸಂಗ್ರಹ ಮಾಡುತ್ತೆ ನೋಡೋಣ – ಆರ್​​.ಅಶೋಕ್..!

ಮೈಸೂರು: ರಾಜ್ಯವ್ಯಾಪಿ ಭಾರೀ ಸದ್ದು ಮಾಡಿದ್ದ ಮುಡಾ ಹಗರಣದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಮೈಸೂರಿನಲ್ಲಿರುವ ಮುಡಾ ಕಛೇರಿ ಮೇಲೆ ಏಕಾಏಕಿ ದಾಳಿ

Live Cricket

Add Your Heading Text Here