ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಮದುವೆ ಆರತಕ್ಷತೆ ಮುಗಿಸಿ ಪಾವಗಡಕ್ಕೆ ಹೋಗ್ತಿದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕಾರು ಪಲ್ಟಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, 58 ವರ್ಷದ ಧನಂಜಯ್, 49 ವರ್ಷದ ಶ್ರೀಕೃಷ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಧನಂಜಯ್ ಪಾವಗಡ ಸರ್ಕಾರಿ ಜೂ. ಕಾಲೇಜಿನ ಪ್ರೌಢಶಾಲಾ ಪ್ರಾಂಶುಪಾಲರಾಗಿದ್ದರು. ಇನ್ನು, ಕಾರಿನಲ್ಲಿದ್ದ ನರಸಿಂಹ ಮತ್ತು ವೆಂಕಟಾಚಲಪತಿಗೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಕೇಸ್ಗೆ ಬಿಗ್ ಟ್ವಿಸ್ಟ್ – ಪ್ರೀತಂ ಗೌಡ ಆಪ್ತ ಸೇರಿ ಇಬ್ಬರು ಎಸ್ಐಟಿ ವಶಕ್ಕೆ..!